ರಾಜ್ಯ

ಬಿಜೆಪಿಯವರಿಗೆ ಧರ್ಮಸ್ಥಳದ ವಿವಾದ ಕೊನೆಗೊಳ್ಳುವುದು ಬೇಕಿಲ್ಲ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೌಜನ್ಯ ಅವರ ಮನೆಗೆ ಭೇಟಿ ನೀಡುವ ಮೂಲಕ ವಿವಾದವನ್ನು ಅನಗತ್ಯವಾಗಿ ಕೆಣಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೊಯ್ಲಿ ಆಕ್ಷೇಪಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಧರ್ಮಸ್ಥಳದ ವಿವಾದ ಕೊನೆಗೊಳ್ಳುವುದು ಬೇಕಿಲ್ಲ. ಅದಕ್ಕಾಗಿ ಪದೇಪದೇ ಕೆಲ ವಿಚಾರಗಳನ್ನು ಕೆಣಕುತ್ತಿದ್ದಾರೆ ಎಂದು ಟೀಕಿಸಿದರು.

ನೀರಿನಲ್ಲಿ ಮುಳುಗುವ ಮನುಷ್ಯನಿಗೆ ಒಂದು ಹುಲ್ಲು ಕಡ್ಡಿಯೂ ಆಶ್ರಯವಾಗುತ್ತದೆ. ಅದೇ ರೀತಿ ಬಿಜೆಪಿಯವರಿಗೆ ಈಗ ಧರ್ಮಸ್ಥಳದ ವಿವಾದ ಬೇಕಾಗಿದೆ. ಅದು ಪೂರ್ಣ ಇತ್ಯರ್ಥಗೊಳ್ಳುವುದು ಬಿಜೆಪಿಗೆ ಬೇಕಿಲ್ಲ ಎಂದರು.

ಸೌಜನ್ಯ ಪ್ರಕರಣದಲ್ಲಿ ಈಗಾಗಲೇ ಸಿಬಿಐ ತನಿಖೆಯಾಗಿ ದೋಷಾರೋಪಣಾ ವರದಿ ಸಲ್ಲಿಕೆಯಾಗಿ, ನ್ಯಾಯಾಲಯವು ತೀರ್ಪು ನೀಡಿದೆ. ಅದು ಮುಗಿದಿದೆ. ಆದರೂ ಬಿಜೆಪಿಯವರು ಸೌಜನ್ಯ ಮನೆಗೆ ಭೇಟಿ ನೀಡಿ ಅನುಕಂಪ ವ್ಯಕ್ತ ಪಡಿಸುವ ಮೂಲಕ ವಿವಾದವನ್ನು ಕೆಣಕುತ್ತಿದ್ದಾರೆ. ಸೌಜನ್ಯ ಪ್ರಕರಣ ಸಂಸ್ಥೆಯ ವಿರುದ್ಧವಿದೆ ಎಂದು ಹೇಳಿದರು.

ಎಸ್‍ಐಟಿ ತನಿಖೆ ಮುಕ್ತಾಯದ ಹಂತದಲ್ಲಿದೆ. ಈಗ ಎನ್‍ಐಎ, ಸಿಬಿಐ ತನಿಖೆಗಳಾಗಬೇಕು ಎಂದು ಹೇಳುವ ಮೂಲಕ ಬಿಜೆಪಿ ಮತ್ತಷ್ಟು ಗೊಂದಲ ಮೂಡಿಸುತ್ತದೆ. ಎಸ್‍ಐಟಿ ತನಿಖೆಯನ್ನು ಧರ್ಮಸ್ಥಳದ ಖಾವಂದರಾದ ವೀರೇಂದ್ರ ಹೆಗ್ಗಡೆಯವರೇ ಸ್ವಾಗತಿಸಿದ್ದಾರೆ. ಅವರು ತುಂಬಾ ಒಳ್ಳೆಯವರು, ತಿಳುವಳಿಕೆ ಹೊಂದಿರುವವರು. ಬಿಜೆಪಿಯವರಿಗೆ ತಿಳುವಳಿಕೆ ಇಲ್ಲ ಎಂದು ಮೊಯ್ಲಿ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

15 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

16 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

17 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

18 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

18 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

19 hours ago