ಬೆಂಗಳೂರು: ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬಿ.ಆರ್ ನಾಯ್ಡು ವಿರುದ್ಧ ಹೌಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿಜೆಪಿ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೂಡಘಟ್ಟ ಅವರು ಈ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಖಾಸಗಿ ದೂರು ನೀಡಿದ್ದರು. ಬಿಜೆಪಿ ಅಭಿಯಾನ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ನ್ನು ಕಾಂಗ್ರೆಸ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿತ್ತು. ಆದ್ದರಿಂದ ಪೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪದ ಮೇಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಇದೀಗ ಡಿಕೆ ಶಿವಕುಮಾರ್ ಮತ್ತು ಬಿಆರ್ ನಾಯ್ಡು ವಿರುದ್ಧ 153(a), 504, 506, 464 ಸೆಕ್ಷನ್ ಅಡಿ ಎಫ್ಐಆರ್ ದಾಖಲಿಸಲಾಗಿದೆ.