ರಾಜ್ಯ

ಬೆಂಗಳೂರಿನಲ್ಲಿ ವಿಜಯೇಂದ್ರ ಬೆಂಬಲಿಗರ ಸಭೆ: ಭಿನ್ನರ ಉಚ್ಛಾಟನೆಗೆ ಆಗ್ರಹ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗ ನಾಯಕರು ಇಂದು ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಭಿನ್ನಮತೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಸದಾಶಿವನಗರದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ನಿವಾಸದಲ್ಲಿ ಸಭೆ ನಡೆಸಿದ ಹಲವು ನಾಯಕರು, ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರನ್ನು ಉಚ್ಛಾಟನೆ ಮಾಡುವಂತೆ ಆಗ್ರಹಿಸಿದರು.

ಇಂದು ನಡೆದ ಸಭೆಯಲ್ಲಿ ರೇಣುಕಾಚಾರ್ಯ, ಸಂಪಂಗಿ, ಲಕ್ಷ್ಮೀನಾರಾಯಣ ಸೇರಿದಂತೆ ಹಲವು ನಾಯಕರು ಭಾಗಿಯಾಗಿ ವಿಜಯೇಂದ್ರ ಪರ ಬ್ಯಾಟ್‌ ಮಾಡಿದರು.

ಸಭೆ ಬಳಿಕ ಮಾತನಾಡಿದ ಹಲವು ನಾಯಕರು, ಶಾಸಕ ಯತ್ನಾಳ್‌ ಅಂಡ್‌ ಟೀಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಕುಮಾರ್‌ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ್‌, ಡಿ.ಕೆ.ಹರೀಶ್‌ ಅವರನ್ನು ಮುಲಾಜಿಲ್ಲದೇ ಪಕ್ಷದಿಂದ ಕಿತ್ತುಹಾಕಬೇಕು. ಇಲ್ಲದಿದ್ದರೆ ಕಾರ್ಯಕರ್ತರಿಗೆ ತಪ್ಪು ಸಂದೇಶ ಹೋಗುತ್ತದೆ ಎಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ವಿಜಯೇಂದ್ರ ಅವರ ಪಾತ್ರವಿಲ್ಲ. ವರಿಷ್ಠರ ಸೂಚನೆಯಂತೆಯೇ ಅವರು ನೇಮಕ ಮಾಡಿದ್ದಾರೆ. ಜಿಲ್ಲಾ ಕೋರ್‌ ಕಮಿಟಿ ಸದಸ್ಯರ ಅಭಿಪ್ರಾಯವನ್ನು ಪಡೆದುಕೊಂಡು ಅಂತಿಮವಾಗಿ ಎಲ್ಲರಿಗೂ ಒಪ್ಪಿಗೆಯಾಗುವವರನ್ನೇ ಆಯ್ಕೆ ಮಾಡಿದ್ದಾರೆ. ಇದಕ್ಕೆ ವಿರೋಧ ಮಾಡುವುದು ಸರಿಯಲ್ಲ ಎಂದರು.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

5 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

5 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

5 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

5 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

5 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

5 hours ago