ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗ ನಾಯಕರು ಇಂದು ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಭಿನ್ನಮತೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಸದಾಶಿವನಗರದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ನಿವಾಸದಲ್ಲಿ ಸಭೆ ನಡೆಸಿದ ಹಲವು ನಾಯಕರು, ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರನ್ನು ಉಚ್ಛಾಟನೆ ಮಾಡುವಂತೆ ಆಗ್ರಹಿಸಿದರು.
ಇಂದು ನಡೆದ ಸಭೆಯಲ್ಲಿ ರೇಣುಕಾಚಾರ್ಯ, ಸಂಪಂಗಿ, ಲಕ್ಷ್ಮೀನಾರಾಯಣ ಸೇರಿದಂತೆ ಹಲವು ನಾಯಕರು ಭಾಗಿಯಾಗಿ ವಿಜಯೇಂದ್ರ ಪರ ಬ್ಯಾಟ್ ಮಾಡಿದರು.
ಸಭೆ ಬಳಿಕ ಮಾತನಾಡಿದ ಹಲವು ನಾಯಕರು, ಶಾಸಕ ಯತ್ನಾಳ್ ಅಂಡ್ ಟೀಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕುಮಾರ್ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ್, ಡಿ.ಕೆ.ಹರೀಶ್ ಅವರನ್ನು ಮುಲಾಜಿಲ್ಲದೇ ಪಕ್ಷದಿಂದ ಕಿತ್ತುಹಾಕಬೇಕು. ಇಲ್ಲದಿದ್ದರೆ ಕಾರ್ಯಕರ್ತರಿಗೆ ತಪ್ಪು ಸಂದೇಶ ಹೋಗುತ್ತದೆ ಎಂದು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ವಿಜಯೇಂದ್ರ ಅವರ ಪಾತ್ರವಿಲ್ಲ. ವರಿಷ್ಠರ ಸೂಚನೆಯಂತೆಯೇ ಅವರು ನೇಮಕ ಮಾಡಿದ್ದಾರೆ. ಜಿಲ್ಲಾ ಕೋರ್ ಕಮಿಟಿ ಸದಸ್ಯರ ಅಭಿಪ್ರಾಯವನ್ನು ಪಡೆದುಕೊಂಡು ಅಂತಿಮವಾಗಿ ಎಲ್ಲರಿಗೂ ಒಪ್ಪಿಗೆಯಾಗುವವರನ್ನೇ ಆಯ್ಕೆ ಮಾಡಿದ್ದಾರೆ. ಇದಕ್ಕೆ ವಿರೋಧ ಮಾಡುವುದು ಸರಿಯಲ್ಲ ಎಂದರು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…