ರಾಜ್ಯ

ಬಿಜೆಪಿಗರು ವಾಮ ಮಾರ್ಗದಲ್ಲಿ ಅಧಿಕಾರ ನಡೆಸಿ ರಾಜ್ಯವನ್ನು ದಿವಾಳಿ ಮಾಡಿದ್ದರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿನೀ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ವಾಮ ಮಾರ್ಗದಲ್ಲಿ ಅಧಿಕಾರ ನಡೆಸುವ ಮೂಲಕ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಬಗ್ಗೆ ನಗರದ  ಕೆಪಿಸಿಸಿ ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಇಂದು ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ವಾಮ ಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿತ್ತು.

ಬಿಜೆಪಿಯವರು ಚೆನ್ನಾಗಿ ತಿಂದು, ಸಾವಿರಾರು ಕೋಟಿ ಕೆಲಸ ಶುರು ಮಾಡಿಸಿ ಸುಮಾರು 40 ಸಾವಿರ ಕೋಟಿಗೂ ಹೆಚ್ಚು ಬಿಲ್ ಕೊಡದೆ, ಬಿಲ್ ಬಾಕಿ ಉಳಿಸಿ ಮನೆಗೆ ಹೋಗಿದ್ದಾರೆ. ದುರಾಡಳಿತ ನಡೆಸಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.

ನೀರಾವರಿ ಇಲಾಖೆಯೊಂದರಲ್ಲೇ 13 ಸಾವಿರ ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ 9,000 ಕೋಟಿ, ಸಣ್ಣನೀರಾವರಿ ಇಲಾಖೆಯಲ್ಲಿ 2,000 ಕೋಟಿ ರೂಪಾಯಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 6,000 ಕೋಟಿ ರೂಪಾಯಿ, ಬೆಂಗಳೂರು ನಗರ 5,000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ.

ಹೀಗೆ ರಾಜ್ಯವನ್ನು ಹಾಳುಮಾಡಿ, ರಾಜ್ಯದ ಆರ್ಥಿಕತೆಯನ್ನು ಹಾಳುಗೆಡವಿ ಹೋಗಿದ್ದಾರೆ. ಇಷ್ಟಾದರೂ ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ.

೫ ಗ್ಯಾಂರೆಂಟಿಯಲ್ಲಿ ಬಿಜೆಪಿ ಫಲಾನುಭವಿಗಳೆ ಹೆಚ್ಚು: 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ ಬಿಜೆಪಿಯವರೇ ಹೆಚ್ಚಿದ್ದಾರೆ. ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದು ದೇಶದಲ್ಲೇ ಮೊದಲು. ಪ್ರತಿಯೊಬ್ಬ ಕಾರ್ಯಕರ್ತನೂ ಎದೆ ಎತ್ತಿ, ತಲೆ ಎತ್ತಿ ಹೇಳಿ ಎಂದಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಅಣಕಿಸಿ ಈಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡಿ ಅದಕ್ಕೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿಯವರು ಅಷ್ಟು ನಿರ್ಲಜ್ಜರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರದ ಕೆಲಸಗಳನ್ನು ಪ್ರತಿ ಮನೆಗೆ ತಲುಪಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಸುಳ್ಳನ್ನು ಸೋಲಿಸಿ ನಮ್ಮ ಸಾಧನೆಗಳನ್ನು ಎತ್ತಿ ಹಿಡಿಯುವ ಮೂಲಕ 28 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕೈಮುಗಿದು ಮನವಿ ಮಾಡುತ್ತೇನೆ. ದಯವಿಟ್ಟು ನಿಮ್ಮ ಹೃದಯದ ಮಾತು ಕೇಳಿ ಎಂದಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago