ರಾಜ್ಯ

ಬಿಜೆಪಿಗರು ವಾಮ ಮಾರ್ಗದಲ್ಲಿ ಅಧಿಕಾರ ನಡೆಸಿ ರಾಜ್ಯವನ್ನು ದಿವಾಳಿ ಮಾಡಿದ್ದರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿನೀ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ವಾಮ ಮಾರ್ಗದಲ್ಲಿ ಅಧಿಕಾರ ನಡೆಸುವ ಮೂಲಕ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಬಗ್ಗೆ ನಗರದ  ಕೆಪಿಸಿಸಿ ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಇಂದು ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ವಾಮ ಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿತ್ತು.

ಬಿಜೆಪಿಯವರು ಚೆನ್ನಾಗಿ ತಿಂದು, ಸಾವಿರಾರು ಕೋಟಿ ಕೆಲಸ ಶುರು ಮಾಡಿಸಿ ಸುಮಾರು 40 ಸಾವಿರ ಕೋಟಿಗೂ ಹೆಚ್ಚು ಬಿಲ್ ಕೊಡದೆ, ಬಿಲ್ ಬಾಕಿ ಉಳಿಸಿ ಮನೆಗೆ ಹೋಗಿದ್ದಾರೆ. ದುರಾಡಳಿತ ನಡೆಸಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.

ನೀರಾವರಿ ಇಲಾಖೆಯೊಂದರಲ್ಲೇ 13 ಸಾವಿರ ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ 9,000 ಕೋಟಿ, ಸಣ್ಣನೀರಾವರಿ ಇಲಾಖೆಯಲ್ಲಿ 2,000 ಕೋಟಿ ರೂಪಾಯಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 6,000 ಕೋಟಿ ರೂಪಾಯಿ, ಬೆಂಗಳೂರು ನಗರ 5,000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ.

ಹೀಗೆ ರಾಜ್ಯವನ್ನು ಹಾಳುಮಾಡಿ, ರಾಜ್ಯದ ಆರ್ಥಿಕತೆಯನ್ನು ಹಾಳುಗೆಡವಿ ಹೋಗಿದ್ದಾರೆ. ಇಷ್ಟಾದರೂ ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ.

೫ ಗ್ಯಾಂರೆಂಟಿಯಲ್ಲಿ ಬಿಜೆಪಿ ಫಲಾನುಭವಿಗಳೆ ಹೆಚ್ಚು: 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ ಬಿಜೆಪಿಯವರೇ ಹೆಚ್ಚಿದ್ದಾರೆ. ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದು ದೇಶದಲ್ಲೇ ಮೊದಲು. ಪ್ರತಿಯೊಬ್ಬ ಕಾರ್ಯಕರ್ತನೂ ಎದೆ ಎತ್ತಿ, ತಲೆ ಎತ್ತಿ ಹೇಳಿ ಎಂದಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಅಣಕಿಸಿ ಈಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡಿ ಅದಕ್ಕೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿಯವರು ಅಷ್ಟು ನಿರ್ಲಜ್ಜರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರದ ಕೆಲಸಗಳನ್ನು ಪ್ರತಿ ಮನೆಗೆ ತಲುಪಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಸುಳ್ಳನ್ನು ಸೋಲಿಸಿ ನಮ್ಮ ಸಾಧನೆಗಳನ್ನು ಎತ್ತಿ ಹಿಡಿಯುವ ಮೂಲಕ 28 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕೈಮುಗಿದು ಮನವಿ ಮಾಡುತ್ತೇನೆ. ದಯವಿಟ್ಟು ನಿಮ್ಮ ಹೃದಯದ ಮಾತು ಕೇಳಿ ಎಂದಿದ್ದಾರೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

4 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

4 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

4 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

4 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

4 hours ago