ರಾಜ್ಯ

ಬಿಜೆಪಿಗರು ವಾಮ ಮಾರ್ಗದಲ್ಲಿ ಅಧಿಕಾರ ನಡೆಸಿ ರಾಜ್ಯವನ್ನು ದಿವಾಳಿ ಮಾಡಿದ್ದರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿನೀ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ವಾಮ ಮಾರ್ಗದಲ್ಲಿ ಅಧಿಕಾರ ನಡೆಸುವ ಮೂಲಕ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಬಗ್ಗೆ ನಗರದ  ಕೆಪಿಸಿಸಿ ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಇಂದು ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ವಾಮ ಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿತ್ತು.

ಬಿಜೆಪಿಯವರು ಚೆನ್ನಾಗಿ ತಿಂದು, ಸಾವಿರಾರು ಕೋಟಿ ಕೆಲಸ ಶುರು ಮಾಡಿಸಿ ಸುಮಾರು 40 ಸಾವಿರ ಕೋಟಿಗೂ ಹೆಚ್ಚು ಬಿಲ್ ಕೊಡದೆ, ಬಿಲ್ ಬಾಕಿ ಉಳಿಸಿ ಮನೆಗೆ ಹೋಗಿದ್ದಾರೆ. ದುರಾಡಳಿತ ನಡೆಸಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.

ನೀರಾವರಿ ಇಲಾಖೆಯೊಂದರಲ್ಲೇ 13 ಸಾವಿರ ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ 9,000 ಕೋಟಿ, ಸಣ್ಣನೀರಾವರಿ ಇಲಾಖೆಯಲ್ಲಿ 2,000 ಕೋಟಿ ರೂಪಾಯಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 6,000 ಕೋಟಿ ರೂಪಾಯಿ, ಬೆಂಗಳೂರು ನಗರ 5,000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ.

ಹೀಗೆ ರಾಜ್ಯವನ್ನು ಹಾಳುಮಾಡಿ, ರಾಜ್ಯದ ಆರ್ಥಿಕತೆಯನ್ನು ಹಾಳುಗೆಡವಿ ಹೋಗಿದ್ದಾರೆ. ಇಷ್ಟಾದರೂ ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ.

೫ ಗ್ಯಾಂರೆಂಟಿಯಲ್ಲಿ ಬಿಜೆಪಿ ಫಲಾನುಭವಿಗಳೆ ಹೆಚ್ಚು: 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ ಬಿಜೆಪಿಯವರೇ ಹೆಚ್ಚಿದ್ದಾರೆ. ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದು ದೇಶದಲ್ಲೇ ಮೊದಲು. ಪ್ರತಿಯೊಬ್ಬ ಕಾರ್ಯಕರ್ತನೂ ಎದೆ ಎತ್ತಿ, ತಲೆ ಎತ್ತಿ ಹೇಳಿ ಎಂದಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಅಣಕಿಸಿ ಈಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡಿ ಅದಕ್ಕೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿಯವರು ಅಷ್ಟು ನಿರ್ಲಜ್ಜರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರದ ಕೆಲಸಗಳನ್ನು ಪ್ರತಿ ಮನೆಗೆ ತಲುಪಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಸುಳ್ಳನ್ನು ಸೋಲಿಸಿ ನಮ್ಮ ಸಾಧನೆಗಳನ್ನು ಎತ್ತಿ ಹಿಡಿಯುವ ಮೂಲಕ 28 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕೈಮುಗಿದು ಮನವಿ ಮಾಡುತ್ತೇನೆ. ದಯವಿಟ್ಟು ನಿಮ್ಮ ಹೃದಯದ ಮಾತು ಕೇಳಿ ಎಂದಿದ್ದಾರೆ.

andolanait

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

11 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

13 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

14 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

14 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

15 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

17 hours ago