ಹೊಸದಿಲ್ಲಿ: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಕುರಿತಂತೆ ಬಿಜೆಪಿ ಸ್ಪಷ್ಟ ನಿಲುವು ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಗುವಾಹಟಿಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು “ಬಿಜೆಪಿಯ ನಿಲುವು ಸ್ಪಷ್ಟವಾಗಿದೆ ನಾವು ದೇಶದ ಮಾತೃ ಶಕ್ತಿಯ ಜೊತೆಗಿದ್ದೇವೆ.
ನಾನು ಕಾಂಗ್ರೆಸ್ ಬಳಿ ಕೇಳಲು ಬಯಸುತ್ತೇನೆ, ಅಲ್ಲಿ ಯಾರ ಸರ್ಕಾರವಿದೆ? ಅಲ್ಲಿರುವುದು ಕಾಂಗ್ರೆಸ್ ಸರ್ಕಾರ. ಅವರೇಕೆ ಇಲ್ಲಿಯ ತನಕ ಕ್ರಮಕೈಗೊಂಡಿಲ್ಲ? ಇದು ರಾಜ್ಯದ ಕಾನೂನು ಸುವ್ಯವಸ್ಥೆಯ ಪ್ರಶ್ನೆಯಾಗಿರುವುದರಿಂದ ನಾವು ಕ್ರಮಕೈಗೊಳ್ಳಲು ಏನೂ ಇಲ್ಲ. ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು.
ನಾವು ತನಿಖೆಯ ಪರ ಇದ್ದೇವೆ ಹಾಗೂ ನಮ್ಮ ಮಿತ್ರ ಪಕ್ಷ ಜೆಡಿ(ಎಸ್) ಕೂಡ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಇಂದು ಅವರ ಕೋರ್ ಸಮಿತಿ ಸಭೆಯಿದೆ ಮತ್ತು ಕ್ರಮಕೈಗೊಳ್ಳಲಾಗುವುದು,” ಎಂದು ಅವರು ಹೇಳಿದ್ದಾರೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…