ಧಾರವಾಡ : ಬಿಜೆಪಿಯವರು ಹತ್ತು ವರ್ಷದಲ್ಲಿ 2500 ಶಾಸಕರನ್ನು ಖರೀದಿಸಿದ್ದಾರೆ. ದುಡ್ಡು ಆಫರ್ ಮಾಡುವುದು ಬಿಜೆಪಿಗೆ ಹೊಸದೇನಲ್ಲ ಅದು ದುಡ್ಡಿನ ಪಕ್ಷ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಆಫರ್ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರ ಪಕ್ಷದ ಹಣವೇ 7500 ಕೋಟಿ ರೂ.ಇದೆ. ಪಕ್ಷದಿಂದ ಸಂಗ್ರಹ ಆಗಿದ್ದು ಅಷ್ಟಿದೆ
ಕೋವಿಡ್ ಸಮಯದ ಪಿಎಂ ರಿಲೀಫ್ ಫಂಡ್ 30 ಸಾವಿರ ಕೋಟಿ ರೂ. ಆಗಿದೆ. ಅವರು ಗುಜರಾತ್ನಲ್ಲಿ ಸ್ಟೇಡಿಯಂ ಕಟ್ಟಿದ್ದಾರೆ. ಆದರೆ ಅವರಿಗೆ ಒಂದೇ ಒಂದು ಆಸ್ಪತ್ರೆ ಕಟ್ಟಲು ಆಗಿಲ್ಲ ಎಂದು ಕಿಡಿಕಾರಿದರು.
ಗೃಹ ಸಚಿವ ಜಿ. ಪರಮೇಶ್ವರ ಮನೆಯಲ್ಲಿ ಡಿನ್ನರ್ ಪಾರ್ಟಿಗೆ ಶಾಸಕರ, ಸಚಿವರ ಆಹ್ವಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮಗೆ ಎಲ್ಲ ಕಡೆಯೂ ಆಹ್ವಾನ ಇರುತ್ತದೆ. ಸತೀಶ ಜಾರಕಿಹೊಳಿಗೆ ಅಸಮಾಧಾನ ಆಗಿಲ್ಲ. ಅವರೊಬ್ಬ ಒಳ್ಳೆಯ ಮಾನವೀಯ ಗುಣದ ವ್ಯಕ್ತಿ. ಅಂಬೇಡ್ಕರ್ ವಾದ, ಬಸವ ವಾದ ಇರುವ ನಾಯಕ. ಅವರನ್ನು ಮೂವತ್ತು ವರ್ಷದಿಂದ ನಾನು ನೋಡುತ್ತ ಬಂದಿದ್ದೇನೆ ಎಂದರು.
ರಾಜಕೀಯ ಭಿನ್ನಾಭಿಪ್ರಾಯ ಬಹಿರಂಗವಾಗಿ ಹೇಳುವ ವ್ಯಕ್ತಿಯಲ್ಲ. ಅಸಮಾಧಾನ ಬೇರೆ ರೀತಿ ತೋಡಿ ಕೊಂಡಿದ್ದಾರೆ. ಅದು ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ ಇನ್ನು ಏನಾದರೂ ಸ್ಪಷ್ಟನೆ ಬೇಕಿದ್ದರೇ ಅವರನ್ನೇ ಕೇಳಬೇಕು ಎಂದರು.
ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ವಿಧಾನಸಭಾ…
ವೈಡ್ ಆಂಗಲ್ ನಿರ್ದೇಶಕ ಚೈತನ್ಯ ಇಮ್ಮಡಿ ಪುಲಿಕೇಶಿಯ ಜೀವನ ಯಾನವನ್ನು ಮುಂಬೈ ಮೂಲದ ನಿರ್ಮಾಣ ಸಂಸ್ಥೆಗಾಗಿ ಬೆಳ್ಳಿತೆರೆಗೆ ನಿರ್ದೇಶಿಸಲಿದ್ದಾರೆ. ಅದರ…
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಏ.೨೪ರಂದು ಪ್ರಕಟವಾಗಲಿದೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರು ಎಂಬ ನಾಣ್ಣುಡಿಯಂತೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿರುವ…
ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದು ಶಿಕ್ಷಣ ಇಲಾಖೆಯ ವ್ಯವಸ್ಥಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಅಂಕಿಅಂಶಗಳ ಪ್ರಕಾರ…
ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…
ಪ್ರಶಾಂತ್ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…