ರಾಜ್ಯ

ಬಿಜೆಪಿಗೆ, ಕಾಂಗ್ರೆಸ್‌ ಬಗ್ಗೆ ಮಾತಾಡೋ ನೈತಿಕತೆ ಇಲ್ಲ: ಈಶ್ವರ್‌ ಖಂಡ್ರೆ

ಬೆಂಗಳೂರು: ಆರ್‌.ಅಶೋಕ್‌ ಅವರ ಸಿಎಂ ಬದಲಾವಣೆ ಹೇಳಿಕೆಗೆ ಸಂಬಂಧಿಸಿದಂತೆ, ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅವರಿಗೆ ಮಾನ ಮರ್ಯಾದೆಯೂ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ವಾಗ್ದಾಳಿ ನಡೆಸಿದರು.

ವಿಧಾನಸೌಧದಲ್ಲಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರ್‌ ಖಂಡ್ರೆ ಅವರು, ಆರ್‌.ಅಶೋಕ್‌ ಅವರ ಹೇಳಿಕೆಗೆ ಯಾವುದೇ ಬೆಲೆ ಇಲ್ಲ. ಅವರು ಗಾಳಿಗೆ ತೂರಿದ ಹಾಗೇ ಹೇಳಿಕೆ ನೀಡುತ್ತಾರೆ. ಅವರ ಹೇಳಿಕೆಗೆ ಜನರೇ ವಿರೋಧ ಮಾಡುತ್ತಿದ್ದಾರೆ. ಅವರ ಪಕ್ಷದಲ್ಲೇ ಒಳ ಜಗಳ ತಾರಕಕ್ಕೇರಿದೆ. ಈಗಿರುವಾಗ ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿದೆಯಾ? ಮಾನ ಮರ್ಯಾದೆ ಇದೆಯಾ? ಮೊದಲು ತಮ್ಮಲ್ಲಿನ ಸಮಸ್ಯೆ ಪರಿಹಾರ ಮಾಡಿಕೊಳ್ಳಲಿ ಎಂದು ಕಿಡಿಕಾರಿದರು.

ಡಿಕೆ ಶಿವಕುಮಾರ್‌ ಸಿಎಂ ಎಂಬ ಶಾಸಕರ ಹೇಳಿಕೆ ಪ್ರತಿಕ್ರಿಯೆ ನೀಡಿ, ಈಗಾಗಲೇ ನಮ್ಮ ವರಿಷ್ಠರು ಈ ವಿಚಾರದ ಬಗ್ಗೆ ಯಾರು ಮಾತನಾಡಬಾರದು ಎಂದು ತಿಳಿಸಿದ್ದಾರೆ. ಆದ ಕಾರಣ ಈ ಬಗ್ಗೆ ನಾನೇನು ಮಾತನಾಡುವುದಿಲ್ಲ. ನಮ್ಮ ಉದ್ದೇಶ ರಾಜ್ಯದ ಅಭಿವೃದ್ದಿ, ರಾಜ್ಯದ ಜನರ ಸಮಸ್ಯೆ ಪರಿಹಾರ ಮಾಡಬೇಕು. ಜನರ ನಂಬಿಕೆಯನ್ನು ಉಳಿಸಿಕೊಳ್ಳಬೇಕು ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

9 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

10 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

10 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

11 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

11 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

12 hours ago