ಬೆಂಗಳೂರು: ಆರ್.ಅಶೋಕ್ ಅವರ ಸಿಎಂ ಬದಲಾವಣೆ ಹೇಳಿಕೆಗೆ ಸಂಬಂಧಿಸಿದಂತೆ, ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅವರಿಗೆ ಮಾನ ಮರ್ಯಾದೆಯೂ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದರು.
ವಿಧಾನಸೌಧದಲ್ಲಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರ್ ಖಂಡ್ರೆ ಅವರು, ಆರ್.ಅಶೋಕ್ ಅವರ ಹೇಳಿಕೆಗೆ ಯಾವುದೇ ಬೆಲೆ ಇಲ್ಲ. ಅವರು ಗಾಳಿಗೆ ತೂರಿದ ಹಾಗೇ ಹೇಳಿಕೆ ನೀಡುತ್ತಾರೆ. ಅವರ ಹೇಳಿಕೆಗೆ ಜನರೇ ವಿರೋಧ ಮಾಡುತ್ತಿದ್ದಾರೆ. ಅವರ ಪಕ್ಷದಲ್ಲೇ ಒಳ ಜಗಳ ತಾರಕಕ್ಕೇರಿದೆ. ಈಗಿರುವಾಗ ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿದೆಯಾ? ಮಾನ ಮರ್ಯಾದೆ ಇದೆಯಾ? ಮೊದಲು ತಮ್ಮಲ್ಲಿನ ಸಮಸ್ಯೆ ಪರಿಹಾರ ಮಾಡಿಕೊಳ್ಳಲಿ ಎಂದು ಕಿಡಿಕಾರಿದರು.
ಡಿಕೆ ಶಿವಕುಮಾರ್ ಸಿಎಂ ಎಂಬ ಶಾಸಕರ ಹೇಳಿಕೆ ಪ್ರತಿಕ್ರಿಯೆ ನೀಡಿ, ಈಗಾಗಲೇ ನಮ್ಮ ವರಿಷ್ಠರು ಈ ವಿಚಾರದ ಬಗ್ಗೆ ಯಾರು ಮಾತನಾಡಬಾರದು ಎಂದು ತಿಳಿಸಿದ್ದಾರೆ. ಆದ ಕಾರಣ ಈ ಬಗ್ಗೆ ನಾನೇನು ಮಾತನಾಡುವುದಿಲ್ಲ. ನಮ್ಮ ಉದ್ದೇಶ ರಾಜ್ಯದ ಅಭಿವೃದ್ದಿ, ರಾಜ್ಯದ ಜನರ ಸಮಸ್ಯೆ ಪರಿಹಾರ ಮಾಡಬೇಕು. ಜನರ ನಂಬಿಕೆಯನ್ನು ಉಳಿಸಿಕೊಳ್ಳಬೇಕು ಎಂದು ತಿಳಿಸಿದರು.
ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…
ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…
ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ…