ಬೆಂಗಳೂರು: ಆರ್.ಅಶೋಕ್ ಅವರ ಸಿಎಂ ಬದಲಾವಣೆ ಹೇಳಿಕೆಗೆ ಸಂಬಂಧಿಸಿದಂತೆ, ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅವರಿಗೆ ಮಾನ ಮರ್ಯಾದೆಯೂ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದರು.
ವಿಧಾನಸೌಧದಲ್ಲಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರ್ ಖಂಡ್ರೆ ಅವರು, ಆರ್.ಅಶೋಕ್ ಅವರ ಹೇಳಿಕೆಗೆ ಯಾವುದೇ ಬೆಲೆ ಇಲ್ಲ. ಅವರು ಗಾಳಿಗೆ ತೂರಿದ ಹಾಗೇ ಹೇಳಿಕೆ ನೀಡುತ್ತಾರೆ. ಅವರ ಹೇಳಿಕೆಗೆ ಜನರೇ ವಿರೋಧ ಮಾಡುತ್ತಿದ್ದಾರೆ. ಅವರ ಪಕ್ಷದಲ್ಲೇ ಒಳ ಜಗಳ ತಾರಕಕ್ಕೇರಿದೆ. ಈಗಿರುವಾಗ ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿದೆಯಾ? ಮಾನ ಮರ್ಯಾದೆ ಇದೆಯಾ? ಮೊದಲು ತಮ್ಮಲ್ಲಿನ ಸಮಸ್ಯೆ ಪರಿಹಾರ ಮಾಡಿಕೊಳ್ಳಲಿ ಎಂದು ಕಿಡಿಕಾರಿದರು.
ಡಿಕೆ ಶಿವಕುಮಾರ್ ಸಿಎಂ ಎಂಬ ಶಾಸಕರ ಹೇಳಿಕೆ ಪ್ರತಿಕ್ರಿಯೆ ನೀಡಿ, ಈಗಾಗಲೇ ನಮ್ಮ ವರಿಷ್ಠರು ಈ ವಿಚಾರದ ಬಗ್ಗೆ ಯಾರು ಮಾತನಾಡಬಾರದು ಎಂದು ತಿಳಿಸಿದ್ದಾರೆ. ಆದ ಕಾರಣ ಈ ಬಗ್ಗೆ ನಾನೇನು ಮಾತನಾಡುವುದಿಲ್ಲ. ನಮ್ಮ ಉದ್ದೇಶ ರಾಜ್ಯದ ಅಭಿವೃದ್ದಿ, ರಾಜ್ಯದ ಜನರ ಸಮಸ್ಯೆ ಪರಿಹಾರ ಮಾಡಬೇಕು. ಜನರ ನಂಬಿಕೆಯನ್ನು ಉಳಿಸಿಕೊಳ್ಳಬೇಕು ಎಂದು ತಿಳಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…