ರಾಜ್ಯ

ಪ್ರತಾಪ್‌ ಸಿಂಹನನ್ನು ಬಿಜೆಪಿಯವರೇ ಕಿತ್ತು ಬಿಸಾಕಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಸೋಬಡಿ ಬೇಟೆಯ ಆ ದಿನಗಳು 

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈಕೋರ್ಟ್ ಮೆಟ್ಟಿಲೇರಿರುವ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಈ ಬಗ್ಗೆ ಸಿಎಂ ಈಗಾಗಲೇ ಉತ್ತರ ನೀಡಿದ್ದಾರೆ. ಪ್ರತಾಪ್ ಸಿಂಹ ಅವರನ್ನು ಅವರ ಪಕ್ಷವೇ ಕಡೆಗಣಿಸಿದೆ. ಪಾಪ ಆತನಿಗೂ ರಾಜಕೀಯ ಮಾಡಬೇಕಿದೆ. ಹೀಗಾಗಿ ತನ್ನ ಅಸ್ತಿತ್ವ ತೋರಿಸಿಕೊಳ್ಳಲು ಹೀಗೆಲ್ಲಾ ಮಾಡುತ್ತಿದ್ದಾರೆ. ಈ ಬಗ್ಗೆ ಕೋರ್ಟ್ ವಿಚಾರಣೆ ಮಾಡಿ, ತೀರ್ಮಾನ ಮಾಡಲಿದೆ ಎಂದರು.

ನಾಡಹಬ್ಬ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಗ್ಗೆ ಕೇಳಿದಾಗ, ಇದರ ಹೊರತಾಗಿ ರಾಜಕೀಯ ಮಾಡಲು ಅವರಿಗೆ ಬೇರೆ ವಿಚಾರ ಇಲ್ಲ. ಅವರಿಗೆ ರಾಜ್ಯದ ಬಗ್ಗೆ ಕಾಳಜಿ ಇದ್ದರೆ ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಬೆಂಗಳೂರು ಅಭಿವೃದ್ಧಿಗೆ ಅನುದಾನ, ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಅನುಮತಿ, ನರೇಗಾ ಅನುದಾನ ಕೊಡಿಸಲಿ. ಅದನ್ನು ಬಿಟ್ಟು ಈ ರೀತಿ ಖಾಲಿ ಮಾತು ಆಡೋದು ಬೇಡ. ಕೇವಲ ಪ್ರಚಾರಕ್ಕೆ ಅವರೆಲ್ಲ ಹೀಗೆ ರಾಜಕೀಯ ಮಾಡುತ್ತಾರೆ ಎಂದು ಹರಿಹಾಯ್ದರು.

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

3 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago