ರಾಜ್ಯ

ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ : ಸುವರ್ಣಸೌಧ ಮುತ್ತಿಗೆ ಯತ್ನ ; ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುವರ್ಣಸೌಧ ಕಡೆ ರೈತ ಮುಖಂಡರು ಮತ್ತು ಬಿಜೆಪಿ ನಾಯಕರು, ಕಾರ್ಯಕರ್ತರು ಪಾದಯಾತ್ರೆ ಹೊರಟರು. ಪ್ರತಿಭಟನೆ ಸ್ಥಳದಿಂದ ಹೈವೇವರೆಗೂ ಪಾದಯಾತ್ರೆ ಬಂದ ಬಿಜೆಪಿ ನಾಯಕರು, ರೈತರು ಬೆಳಗಾವಿ ಸರ್ವಿದ್ ರಸ್ತೆ ಮೇಲೆಯೇ ಸಾಗಿದರು. ಹಲಗಾ ಮಾರ್ಗವಾಗಿ ಸೌಧ ಬಳಿ ಹೊರಟ ಮೆರವಣಿಗೆಯನ್ನು ಪೊಲೀಸರು ತಡೆದರು. ಬಿಜೆಪಿ ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಇದಕ್ಕೂ ಮೊದಲು ಬೆಳಗಾವಿ ಮಾಲಿನಿ ಗ್ರೌಂಡ್‌ನಲ್ಲಿ ಬಿಜೆಪಿ ನೇತೃತ್ವದಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸಿದರು. ಪ್ಲೆಕಾರ್ಡ್‌ಗಳನ್ನು ಹಿಡಿದು ವೇದಿಕೆ ಮೇಲೆ ನಾಯಕರು, ರೈತ ಪ್ರಮುಖರು ಇದ್ದರು. ರೈತರ ಹೋರಾಟದಲ್ಲಿ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡರು.

ಬಿಜೆಪಿ ಮತ್ತು ರೈತರ ಪ್ರತಿಭಟನೆಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿತು. ರೈತರ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸುವ ಕೆಲಸ ಮಾಡಬೇಕು, ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ನಾವು ಬಿಡಲ್ಲ. ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು, ಎರಡು ಜಿಲ್ಲೆ ಆಗಬೇಕು, ಚಿಕ್ಕೋಡಿ ಮತ್ತು ಗೋಕಾಕ್ ಜಿಲ್ಲೆಗಳಾಗಿ ವಿಭಜನೆ ಮಾಡಿ, ಬೆಳಗಾವಿ ಜಿಲ್ಲೆ ವಿಭಜನೆ ಮಾಡದಿದ್ದಲ್ಲಿ ಉ.ಕ ಭಾಗಕ್ಕೆ ಮಲತಾಯಿ ಧೋರಣೆ ಮುಂದುವರೆಸಿದರೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆ ತೀವ್ರಗೊಳಿಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಪ್ರತ್ಯೇಕ ಉ.ಕ ರಾಜ್ಯದ ಬೇಡಿಕೆಯನ್ನು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಪ್ರಸ್ತಾಪಿಸಿದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಅಭಾವಕ್ಕೇನು ಕಾರಣ? ಇಂಧನ ಸಚಿವಾಲಯ ಹೇಳೋದೇನು?

ಹೊಸದಿಲ್ಲಿ : ಇರಾನ್-ಇಸ್ರೇಲ್‌,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್‌,ಪೆಟ್ರೋಲ್‌ ಮತ್ತು ಅಡುಗೆ ಅನಿಲ…

12 mins ago

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…

38 mins ago

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು…

2 hours ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ…

2 hours ago

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

4 hours ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

4 hours ago