ರಾಜ್ಯ

ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ : ಸುವರ್ಣಸೌಧ ಮುತ್ತಿಗೆ ಯತ್ನ ; ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುವರ್ಣಸೌಧ ಕಡೆ ರೈತ ಮುಖಂಡರು ಮತ್ತು ಬಿಜೆಪಿ ನಾಯಕರು, ಕಾರ್ಯಕರ್ತರು ಪಾದಯಾತ್ರೆ ಹೊರಟರು. ಪ್ರತಿಭಟನೆ ಸ್ಥಳದಿಂದ ಹೈವೇವರೆಗೂ ಪಾದಯಾತ್ರೆ ಬಂದ ಬಿಜೆಪಿ ನಾಯಕರು, ರೈತರು ಬೆಳಗಾವಿ ಸರ್ವಿದ್ ರಸ್ತೆ ಮೇಲೆಯೇ ಸಾಗಿದರು. ಹಲಗಾ ಮಾರ್ಗವಾಗಿ ಸೌಧ ಬಳಿ ಹೊರಟ ಮೆರವಣಿಗೆಯನ್ನು ಪೊಲೀಸರು ತಡೆದರು. ಬಿಜೆಪಿ ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಇದಕ್ಕೂ ಮೊದಲು ಬೆಳಗಾವಿ ಮಾಲಿನಿ ಗ್ರೌಂಡ್‌ನಲ್ಲಿ ಬಿಜೆಪಿ ನೇತೃತ್ವದಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸಿದರು. ಪ್ಲೆಕಾರ್ಡ್‌ಗಳನ್ನು ಹಿಡಿದು ವೇದಿಕೆ ಮೇಲೆ ನಾಯಕರು, ರೈತ ಪ್ರಮುಖರು ಇದ್ದರು. ರೈತರ ಹೋರಾಟದಲ್ಲಿ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡರು.

ಬಿಜೆಪಿ ಮತ್ತು ರೈತರ ಪ್ರತಿಭಟನೆಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿತು. ರೈತರ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸುವ ಕೆಲಸ ಮಾಡಬೇಕು, ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ನಾವು ಬಿಡಲ್ಲ. ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು, ಎರಡು ಜಿಲ್ಲೆ ಆಗಬೇಕು, ಚಿಕ್ಕೋಡಿ ಮತ್ತು ಗೋಕಾಕ್ ಜಿಲ್ಲೆಗಳಾಗಿ ವಿಭಜನೆ ಮಾಡಿ, ಬೆಳಗಾವಿ ಜಿಲ್ಲೆ ವಿಭಜನೆ ಮಾಡದಿದ್ದಲ್ಲಿ ಉ.ಕ ಭಾಗಕ್ಕೆ ಮಲತಾಯಿ ಧೋರಣೆ ಮುಂದುವರೆಸಿದರೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆ ತೀವ್ರಗೊಳಿಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಪ್ರತ್ಯೇಕ ಉ.ಕ ರಾಜ್ಯದ ಬೇಡಿಕೆಯನ್ನು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಪ್ರಸ್ತಾಪಿಸಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

7 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

7 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

22 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

23 hours ago