ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುವರ್ಣಸೌಧ ಕಡೆ ರೈತ ಮುಖಂಡರು ಮತ್ತು ಬಿಜೆಪಿ ನಾಯಕರು, ಕಾರ್ಯಕರ್ತರು ಪಾದಯಾತ್ರೆ ಹೊರಟರು. ಪ್ರತಿಭಟನೆ ಸ್ಥಳದಿಂದ ಹೈವೇವರೆಗೂ ಪಾದಯಾತ್ರೆ ಬಂದ ಬಿಜೆಪಿ ನಾಯಕರು, ರೈತರು ಬೆಳಗಾವಿ ಸರ್ವಿದ್ ರಸ್ತೆ ಮೇಲೆಯೇ ಸಾಗಿದರು. ಹಲಗಾ ಮಾರ್ಗವಾಗಿ ಸೌಧ ಬಳಿ ಹೊರಟ ಮೆರವಣಿಗೆಯನ್ನು ಪೊಲೀಸರು ತಡೆದರು. ಬಿಜೆಪಿ ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್ ನಡೆಗೆ ವಿಪಕ್ಷ ಬಿಜೆಪಿ ಕಿಡಿ
ಇದಕ್ಕೂ ಮೊದಲು ಬೆಳಗಾವಿ ಮಾಲಿನಿ ಗ್ರೌಂಡ್ನಲ್ಲಿ ಬಿಜೆಪಿ ನೇತೃತ್ವದಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸಿದರು. ಪ್ಲೆಕಾರ್ಡ್ಗಳನ್ನು ಹಿಡಿದು ವೇದಿಕೆ ಮೇಲೆ ನಾಯಕರು, ರೈತ ಪ್ರಮುಖರು ಇದ್ದರು. ರೈತರ ಹೋರಾಟದಲ್ಲಿ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡರು.
ಬಿಜೆಪಿ ಮತ್ತು ರೈತರ ಪ್ರತಿಭಟನೆಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿತು. ರೈತರ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸುವ ಕೆಲಸ ಮಾಡಬೇಕು, ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ನಾವು ಬಿಡಲ್ಲ. ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು, ಎರಡು ಜಿಲ್ಲೆ ಆಗಬೇಕು, ಚಿಕ್ಕೋಡಿ ಮತ್ತು ಗೋಕಾಕ್ ಜಿಲ್ಲೆಗಳಾಗಿ ವಿಭಜನೆ ಮಾಡಿ, ಬೆಳಗಾವಿ ಜಿಲ್ಲೆ ವಿಭಜನೆ ಮಾಡದಿದ್ದಲ್ಲಿ ಉ.ಕ ಭಾಗಕ್ಕೆ ಮಲತಾಯಿ ಧೋರಣೆ ಮುಂದುವರೆಸಿದರೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆ ತೀವ್ರಗೊಳಿಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಪ್ರತ್ಯೇಕ ಉ.ಕ ರಾಜ್ಯದ ಬೇಡಿಕೆಯನ್ನು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಪ್ರಸ್ತಾಪಿಸಿದರು.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…