Categories: ರಾಜ್ಯ

ಬಿಜೆಪಿ ಹೈಕಮಾಂಡ್‌ ವಿರುದ್ಧ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಬೇಸರ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದ ಹೋರಾಟ ಹಾಗೂ ಬಿಜೆಪಿ ಭಿನ್ನಮತದ ಬಗ್ಗೆ ಎರಡು ಪತ್ರ ಬರೆದರೂ ಹೈಕಮಾಂಡ್‌ನಿಂದ ಯಾವುದೇ ಕ್ರಮವಿಲ್ಲ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿಯನ್ನು ದಕ್ಷಿಣ ಭಾರತದ ಹೆಬ್ಬಾಗಿಲು ಎಂದು ಕರೆಯುತ್ತಾರೆ. ಆದರೆ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ, ಬಣ ರಾಜಕೀಯದಿಂದಾಗಿ ಇಂದು ಈ ಪಕ್ಷಕ್ಕೆ ಈ ಸ್ಥಿತಿ ಬಂದಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಈ ಬಗ್ಗೆ ನಾನು ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿದ್ದೆ. ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆ ಬಗ್ಗೆಯೂ ಪತ್ರ ಬರೆದಿದ್ದೆ. ಆದರೆ ಎರಡೂ ಪತ್ರಗಳಿಗೂ ವರಿಷ್ಠರಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಮ್ಮ ನಾಯಕ ನಡುವಿನ ಭಿನ್ನಮತ ಹೆಚ್ಚು ಸದ್ದು ಮಾಡುತ್ತಿದೆ. ಇದು ಸರಿಯಲ್ಲ. ಎರಡು ಪತ್ರ ಬರೆದಿದ್ದರೂ ಹೈಕಮಾಂಡ್‌ನಿಂದ ಯಾವುದೇ ಕ್ರಮ ಜರುಗಿಸದಿರುವುದು ಹಾಗೂ ಪಕ್ಷಕ್ಕೆ ಇಂದು ಈ ಸ್ಥಿತಿ ಬಂದಿರುವುದು ಬಹಳ ನೋವಿನ ಸಂಗತಿ ಎಂದು ಬೇಸರಪಟ್ಟರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೆಪಿಟಿಸಿಎಲ್ : 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ

ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…

2 mins ago

ಕ್ರೀಡಾ ನೇಮಕಾತಿ ಮೀಸಲಾತಿ ಅನುಷ್ಠಾನ : ಸಿಎಂ ಘೋಷಣೆ

ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…

7 mins ago

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

13 mins ago

ಹೊಸದಿಲ್ಲಿ : ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಒಂದನ್ನು ಇಂದು ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದ್ದು ಹಡಗಿನಲ್ಲಿದ್ದ ೧೧ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…

16 mins ago

ಮೈಸೂರು | 21 ರಂದು ಪಲ್ಸ್ ಪೋಲಿಯೋ ಅಭಿಯಾನ

ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…

57 mins ago

ವೈದ್ಯ, ನರ್ಸ್‌ ಹುದ್ದೆ ಭರ್ತಿಗೆ ಒಂದು ತಿಂಗಳೊಳಗೆ ಕ್ರಮ : ಆರೋಗ್ಯ ಸಚಿವ ಗುಂಡೂರಾವ್‌

ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ…

1 hour ago