ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಂಡದ ಹೋರಾಟ ಹಾಗೂ ಬಿಜೆಪಿ ಭಿನ್ನಮತದ ಬಗ್ಗೆ ಎರಡು ಪತ್ರ ಬರೆದರೂ ಹೈಕಮಾಂಡ್ನಿಂದ ಯಾವುದೇ ಕ್ರಮವಿಲ್ಲ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿಯನ್ನು ದಕ್ಷಿಣ ಭಾರತದ ಹೆಬ್ಬಾಗಿಲು ಎಂದು ಕರೆಯುತ್ತಾರೆ. ಆದರೆ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ, ಬಣ ರಾಜಕೀಯದಿಂದಾಗಿ ಇಂದು ಈ ಪಕ್ಷಕ್ಕೆ ಈ ಸ್ಥಿತಿ ಬಂದಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಈ ಬಗ್ಗೆ ನಾನು ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿದ್ದೆ. ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆ ಬಗ್ಗೆಯೂ ಪತ್ರ ಬರೆದಿದ್ದೆ. ಆದರೆ ಎರಡೂ ಪತ್ರಗಳಿಗೂ ವರಿಷ್ಠರಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಮ್ಮ ನಾಯಕ ನಡುವಿನ ಭಿನ್ನಮತ ಹೆಚ್ಚು ಸದ್ದು ಮಾಡುತ್ತಿದೆ. ಇದು ಸರಿಯಲ್ಲ. ಎರಡು ಪತ್ರ ಬರೆದಿದ್ದರೂ ಹೈಕಮಾಂಡ್ನಿಂದ ಯಾವುದೇ ಕ್ರಮ ಜರುಗಿಸದಿರುವುದು ಹಾಗೂ ಪಕ್ಷಕ್ಕೆ ಇಂದು ಈ ಸ್ಥಿತಿ ಬಂದಿರುವುದು ಬಹಳ ನೋವಿನ ಸಂಗತಿ ಎಂದು ಬೇಸರಪಟ್ಟರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…