ರಾಜ್ಯ

ಕಾಂಗ್ರೆಸ್‌ ಒಳ ಜಗಳ: ಬಿಜೆಪಿ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಆಂತರಿಕ ಒಳ ಜಗಳಗಳು ಆಗುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಿದ್ದರಾಮಯ್ಯ ರಾಜಕೀಯದಲ್ಲಿ ಇರುವವರೆಗೆ ನೀವು ಸಿಎಂ ಆಗಲು ಸಾಧ್ಯವೇ? ಎಂದು ಪ್ರಶ್ನಿಸಿ ಬಿಜೆಪಿ ವ್ಯಂಗ್ಯ ಮಾಡಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ಕಾಂಗ್ರೆಸ್ ಒಳಜಗಳ ಈಗ ಮಗ್ಗುಲು ಬದಲಾಯಿಸಿದೆ. ಸಿದ್ದರಾಮಯ್ಯ ನಾಮಜಪ ಮಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣದವರಿಗೆ ಡಿಕೆಶಿ ಗುನ್ನಾ ಇಟ್ಟಿದ್ದಾರೆ ಎಂದು ಲೇವಡಿ ಮಾಡಿದೆ.

ಸಿದ್ದರಾಮಯ್ಯ ಹೆಸರು ಹೇಳಿ ತಮ್ಮ ರಾಜಕೀಯವನ್ನು ಗಟ್ಟಿಮಾಡಿಕೊಳ್ಳುತ್ತಿದ್ದ ಮತ್ತು ಸಿದ್ದರಾಮಯ್ಯ ಅವರ ಕುರ್ಚಿಯನ್ನು ಗಟ್ಟಿಮಾಡಲು ಯತ್ನಿಸುತ್ತಿದ್ದವರಿಗೆ  ಸಿದ್ದರಾಮಯ್ಯ ಹೆಸರು ದುರ್ಬಳಕೆ ಮಾಡಬೇಡಿ ಎನ್ನುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಟಾಂಗ್ ನೀಡಿದ್ದಾರೆ ಎಂದು ಟೀಕಿಸಿದೆ.

ಡಿಸಿಎಂ ಡಿಕೆಶಿ ಅವರಿಗೆ ಇದು ರಾಜಕೀಯದಲ್ಲಿ ನಿರ್ಣಾಯಕ ಯುದ್ದವಾಗಿದೆ. ಮಾಡು ಇಲ್ಲವೇ ಮಡಿ ಯುದ್ಧದಲ್ಲಿ ಗೆದ್ದರಷ್ಟೇ ಸಿಎಂ‌ ಹುದ್ದೆ,‌ ಇಲ್ಲದಿದ್ದರೆ ರಾಜಕೀಯ ಸನ್ಯಾಸತ್ವ ಸ್ವೀಕರಿಸುವ ಸಂದರ್ಭ ಬರಲಿದೆ ಎಂದು ಹೇಳಿದೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

44 mins ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

60 mins ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

1 hour ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

2 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

2 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago