ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಒಳ ಜಗಳಗಳು ಆಗುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ರಾಜಕೀಯದಲ್ಲಿ ಇರುವವರೆಗೆ ನೀವು ಸಿಎಂ ಆಗಲು ಸಾಧ್ಯವೇ? ಎಂದು ಪ್ರಶ್ನಿಸಿ ಬಿಜೆಪಿ ವ್ಯಂಗ್ಯ ಮಾಡಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ಕಾಂಗ್ರೆಸ್ ಒಳಜಗಳ ಈಗ ಮಗ್ಗುಲು ಬದಲಾಯಿಸಿದೆ. ಸಿದ್ದರಾಮಯ್ಯ ನಾಮಜಪ ಮಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣದವರಿಗೆ ಡಿಕೆಶಿ ಗುನ್ನಾ ಇಟ್ಟಿದ್ದಾರೆ ಎಂದು ಲೇವಡಿ ಮಾಡಿದೆ.
ಸಿದ್ದರಾಮಯ್ಯ ಹೆಸರು ಹೇಳಿ ತಮ್ಮ ರಾಜಕೀಯವನ್ನು ಗಟ್ಟಿಮಾಡಿಕೊಳ್ಳುತ್ತಿದ್ದ ಮತ್ತು ಸಿದ್ದರಾಮಯ್ಯ ಅವರ ಕುರ್ಚಿಯನ್ನು ಗಟ್ಟಿಮಾಡಲು ಯತ್ನಿಸುತ್ತಿದ್ದವರಿಗೆ ಸಿದ್ದರಾಮಯ್ಯ ಹೆಸರು ದುರ್ಬಳಕೆ ಮಾಡಬೇಡಿ ಎನ್ನುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ ಎಂದು ಟೀಕಿಸಿದೆ.
ಡಿಸಿಎಂ ಡಿಕೆಶಿ ಅವರಿಗೆ ಇದು ರಾಜಕೀಯದಲ್ಲಿ ನಿರ್ಣಾಯಕ ಯುದ್ದವಾಗಿದೆ. ಮಾಡು ಇಲ್ಲವೇ ಮಡಿ ಯುದ್ಧದಲ್ಲಿ ಗೆದ್ದರಷ್ಟೇ ಸಿಎಂ ಹುದ್ದೆ, ಇಲ್ಲದಿದ್ದರೆ ರಾಜಕೀಯ ಸನ್ಯಾಸತ್ವ ಸ್ವೀಕರಿಸುವ ಸಂದರ್ಭ ಬರಲಿದೆ ಎಂದು ಹೇಳಿದೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…