ಕೋಲಾರ: ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಕೋಲಾರದಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ನಡೆಸಿದ ರೋಡ್ ಶೋ ನಲ್ಲಿ ಮಾತನಾಡಿದರು.
ನಮ್ಮ ಅಭ್ಯರ್ಥಿ ಗೌತಮ್ ಸಜ್ಜನರು. ಸಾಮಾನ್ಯ ಕಾರ್ಯಕರ್ತರಾಗಿ ಬುಡಮಟ್ಟದಿಂದ ಬೆಳೆದು ಈಗ ಅಭ್ಯರ್ಥಿ ಆಗಿದ್ದಾರೆ. ಇವರು ಅತ್ಯಂತ ಬಹುಮತದಿಂದ ಗೆಲ್ಲುತ್ತಾರೆ. ನಿಮ್ಮೆಲ್ಲರ ಸಹಕಾರ, ಆಶೀರ್ವಾದ ಗೌತಮ್ ಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರಲಿ ಎಂದರು.
ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್, ಸಿಲಿಂಡರ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ-ಕಾಳು, ತರಕಾರಿ ಸೇರಿ ಪ್ರತಿಯೊಂದರ ಬೆಲೆಯನ್ನು ವಿಪರೀತ ಏರಿಸಿತ್ತು. ಇದರಿಂದ ನಾಡಿನ ಪ್ರತೀ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದವು. ಈ ಸಂಕಷ್ಟಕ್ಕೆ ಸ್ಪಂದಿಸಿ ಕಷ್ಟ ಕಡಿಮೆ ಮಾಡುವ ಉದ್ದೇಶದಿಂದ ಐದು ಗ್ಯಾರಂಟಿ ಭರವಸೆಗಳನ್ನು ಘೋಷಿಸಿದೆವು. ಅಧಿಕಾರಕ್ಕೆ ಬಂದು ಐದಕ್ಕೆ ಐದನ್ನೂ ಜಾರಿ ಮಾಡಿದೆವು.
ಮೊದಲಿಗೆ ಗ್ಯಾರಂಟಿಗಳ ಜಾರಿ ಸಾಧ್ಯವೇ ಇಲ್ಲ ಎನ್ನುವ ಸುಳ್ಳನ್ನು ಬಿಜೆಪಿ ಹುಟ್ಟಿಸಿತು. ಗ್ಯಾರಂಟಿಗಳು ಜಾರಿಯಾದ ಬಳಿಕ ಹೊಸ ಸುಳ್ಳು ಸೃಷ್ಟಿಸಿದ್ದಾರೆ. ಗ್ಯಾರಂಟಿಗಳು ನಿಂತು ಹೋಗುತ್ತವೆ ಎನ್ನುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಐದು ವರ್ಷ ವಾರಂಟಿ ಇದೆ ಎಂದರು.
ಸೋಲುವ ಭೀತಿಯಿಂದ ಬಿಜೆಪಿ ಸೃಷ್ಟಿಸುವ ಸುಳ್ಳುಗಳಿಗೆ ಸೊಪ್ಪಾಕಬೇಡಿ. ಬಿಜೆಪಿ ಸುಳ್ಳಿನ ಕಾರ್ಖಾನೆ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಮತಕ್ಕೆ ಘನತೆ ತಂದಿದ್ದೇವೆ. ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲಿಸಿ ನಿಮ್ಮ ಮತಕ್ಕೆ ಮೌಲ್ಯ ತಂದು ಕೊಡುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತದೆ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಮಾಜಿ ಸಚಿವ ರಮೇಶ್ ಕುಮಾರ್, ಮಾಜಿ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಸೇರಿ ಕೋಲಾರ ಜಿಲ್ಲೆಯ ಎಲ್ಲಾ ಶಾಸಕರುಗಳು ಹಾಜರಿದ್ದರು.
‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್.ಟಿ.ವಿಠ್ಠಲಮೂರ್ತಿ ನಾನು…
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…