cm siddaramaiah
ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಾಗಲಕೋಟೆ ಉಪಚುನಾವಣಾ ಪ್ರಚಾರ ಕಾರ್ಯ ಉತ್ತಮವಾಗಿ ನಡೆಯುತ್ತಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆತಿದೆ. ಎಲ್ಲೆಡೆ ಅಭೂತಪೂರ್ವ ಸ್ಪಂದನೆ ಸಿಗುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಬಡವರಿಗಾಗಿ ರೂಪಿಸಿಸಲ್ಪಟ್ಟಿವೆ. ಎಲ್ಲಾ ಜಾತಿ, ಧರ್ಮ, ಭಾಷೆಗಳಿಗೆ ಸೇರಿದ ಜನರಿಗೆ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದು, ಗ್ಯಾರಂಟಿ ಯೋಜನೆಗಳು ಸಾಮಾಜಿಕ ಬದ್ಧತೆಯನ್ನು ಒದಗಿಸುವ ಹೂಡಿಕೆಯಾಗಿದೆ. ಇದೂ ಕೂಡ ಅಭಿವೃದ್ದಿಯೇ ಎಂದರು.
ಅಭಿವೃದ್ಧಿಯೆಂದರೆ ಕೇವಲ ರಸ್ತೆ, ಸೇತುವೆ, ಕಟ್ಟಡಗಳು ಮಾತ್ರವಲ್ಲ. ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವುದು ಕೂಡ ಆಗಿದೆ ಎಂದರು.
ಸಾಮಾಜಿಕ ಯೋಜನೆಗಳನ್ನು ಘೋಷಿಸಿದ ಮೇಲೆ ಬಿಜೆಪಿ ಅಂದಿನಿಂದ ಇಂದಿನವರೆಗೆ ವಿರೋಧಿಸುತ್ತಲೇ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಎಲ್ಲರೂ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ಬಂದಿದ್ದಾರೆ. ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಚನೆಗಳು ಜಾರಿಯಲ್ಲಿದ್ದು 24/3/2026 ವರೆಗೆ 1.31 ಲಕ್ಷ ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದೇವೆ. ಇದರ ಜೊತೆಗೆ, ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ಪೊಲೀಸ್ ವ್ಯವಸ್ಥೆಗೆ ವೆಚ್ಚ, ಎಸ್ ಸಿ ಎಸ್ ಪಿ/ ಟಿ ಎಸ್ ಪಿ ಯೋಜನೆಗಳಿಗೆ ವೆಚ್ಚ ಮಾಡುವುದನ್ನು ಕಡಿಮೆ ಮಾಡಿಲ್ಲ. ಕಳೆದ ವರ್ಷದಲ್ಲಿ 42,000 ಕೋಟಿ ವೆಚ್ಚ ಮಾಡಿದ್ದರೆ, ಈ ವರ್ಷ 44,000 ಕೋಟಿಗೂ ಹೆಚ್ಚು ವೆಚ್ಚ ಮಾಡಲಾಗುತ್ತಿದೆ. ಅಭಿವೃದ್ಧಿ ಕೆಲಸಗಳ್ಯಾವುವೂ ಕುಂಠಿತವಾಗಿಲ್ಲ ಎಂದು ಹೇಳಿದರು.
ಇನ್ನು ಸಿದ್ದರಾಮಯ್ಯ ಸಾಲ ಮಾಡಿದ್ದಾರೆ ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಆರ್ಥಿಕ ಹೊಣೆಗಾರಿಕೆ ಕಾಯ್ದೆಯನ್ನು ಬಿಜೆಪಿ ಸರಿಯಾಗಿ ಓದಿಕೊಳ್ಳಬೇಕು. ರಾಜ್ಯಗಳು ಆರ್ಥಿಕ ಸಂಕಷ್ಟದಲ್ಲಿದ್ದಾಗ 2002 ರಲ್ಲಿ ಜಾರಿಯಾದ ಈ ಕಾಯ್ದೆಯ ಪ್ರಕಾರ ಮೂರು ಮಾನದಂಡಗಳನ್ನು ಈಡೇರಿಸಬೇಕು. ಆರ್ಥಿಕ ಕೊರತೆ ಜಿಡಿಪಿಯ ಶೇ 3% ಒಳಗಿರಬೇಕು.33 ಲಕ್ಷದ 5500 ಲಕ್ಷ ಕೋಟಿ ಪೈಕಿ 25% ಸಾಲವಿರಬೇಕು. ಬಿಜೆಪಿ ಮತ್ತೊಮ್ಮೆ ಬಜೆಟ್ ಪುಸ್ಕತ ಓದಿಕೊಳ್ಳಲಿ. ಜಿ ಡಿ ಪಿ ಐ ಶೇಕಡ 25ಕ್ಕಿಂತ ಸಾಲ ಹೆಚ್ಚಾಗಬಾರದು. ನಮ್ಮ ಸಾಲ 24.94 ರಲ್ಲಿದೆ. ಹೀಗಾಗಿ ಸಾಲ ಮಿತಿಮೀರಿಲ್ಲ.
ಯಾವುದೇ ರಾಜ್ಯ ಸಿಕ್ಕಾಪಟ್ಟೆ ಸಾಲ ಮಾಡಲು ಸಾಧ್ಯವಿಲ್ಲ. ಇಷ್ಟೇ ಸಾಲ ಕೂಡಬೇಕೆಂದು ಕೇಂದ್ರ ಸರ್ಕಾರದ ಆರ್ಥಿಕ ಇಲಾಖೆ ನಿಗದಿ ಮಾಡುತ್ತದೆ. ಈ ವಿಷಯ ಬಿಜೆಪಿಗೆ ತಿಳಿದಿದೆಯೋ ಇಲ್ಲವೋ ಎನ್ನುವುದು ಗೊತ್ತಿಲ್ಲ. ಸಾಲ ಮಾಡಿದ್ದೇನೆ ಎನ್ನುವುದು ಹಸಿ ಸುಳ್ಳು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳನ್ನು ಮೀರಿಲ್ಲ. ಆರ್ಥಿಕ ಶಿಸ್ತು ಕಾಪಾಡಿಕೊಂಡಿದ್ದೇವೆ ಎಂದರು.
ಬಿಜೆಪಿಯಿಂದ ಉಚ್ಛಾಟಿತರಾಗಿರುವ ಶಾಸಕ ಯತ್ನಾಳ್ ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿದೆ. ಬಿಜೆಪಿಯವರು ಸೋಲಿನ ಭಯದಿಂದ ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಪ್ರತಿಪಕ್ಷಗಳ ಹೇಳಿಕೆಗಳಿಗೆ ನಾವು ಪ್ರತಿಕ್ರಿಯಿಸುವುದಿಲ್ಲ. ಸರ್ಕಾರದ ಕೆಲಸವನ್ನು ಜನರ ಮುಂದಿಡುತ್ತೇವೆ ಎಂದರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…