ರಾಜ್ಯ

ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಾಗಲಕೋಟೆ ಉಪಚುನಾವಣಾ ಪ್ರಚಾರ ಕಾರ್ಯ ಉತ್ತಮವಾಗಿ ನಡೆಯುತ್ತಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆತಿದೆ. ಎಲ್ಲೆಡೆ ಅಭೂತಪೂರ್ವ ಸ್ಪಂದನೆ ಸಿಗುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಬಡವರಿಗಾಗಿ ರೂಪಿಸಿಸಲ್ಪಟ್ಟಿವೆ. ಎಲ್ಲಾ ಜಾತಿ, ಧರ್ಮ, ಭಾಷೆಗಳಿಗೆ ಸೇರಿದ ಜನರಿಗೆ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದು, ಗ್ಯಾರಂಟಿ ಯೋಜನೆಗಳು ಸಾಮಾಜಿಕ ಬದ್ಧತೆಯನ್ನು ಒದಗಿಸುವ ಹೂಡಿಕೆಯಾಗಿದೆ. ಇದೂ ಕೂಡ ಅಭಿವೃದ್ದಿಯೇ ಎಂದರು.

ಅಭಿವೃದ್ಧಿಯೆಂದರೆ ಕೇವಲ ರಸ್ತೆ, ಸೇತುವೆ, ಕಟ್ಟಡಗಳು ಮಾತ್ರವಲ್ಲ. ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವುದು ಕೂಡ ಆಗಿದೆ ಎಂದರು.

ಸಾಮಾಜಿಕ ಯೋಜನೆಗಳನ್ನು ಘೋಷಿಸಿದ ಮೇಲೆ ಬಿಜೆಪಿ ಅಂದಿನಿಂದ ಇಂದಿನವರೆಗೆ ವಿರೋಧಿಸುತ್ತಲೇ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಎಲ್ಲರೂ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ಬಂದಿದ್ದಾರೆ. ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಚನೆಗಳು ಜಾರಿಯಲ್ಲಿದ್ದು 24/3/2026 ವರೆಗೆ 1.31 ಲಕ್ಷ ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದೇವೆ. ಇದರ ಜೊತೆಗೆ, ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ಪೊಲೀಸ್ ವ್ಯವಸ್ಥೆಗೆ ವೆಚ್ಚ, ಎಸ್ ಸಿ ಎಸ್ ಪಿ/ ಟಿ ಎಸ್ ಪಿ ಯೋಜನೆಗಳಿಗೆ ವೆಚ್ಚ ಮಾಡುವುದನ್ನು ಕಡಿಮೆ ಮಾಡಿಲ್ಲ. ಕಳೆದ ವರ್ಷದಲ್ಲಿ 42,000 ಕೋಟಿ ವೆಚ್ಚ ಮಾಡಿದ್ದರೆ, ಈ ವರ್ಷ 44,000 ಕೋಟಿಗೂ ಹೆಚ್ಚು ವೆಚ್ಚ ಮಾಡಲಾಗುತ್ತಿದೆ. ಅಭಿವೃದ್ಧಿ ಕೆಲಸಗಳ್ಯಾವುವೂ ಕುಂಠಿತವಾಗಿಲ್ಲ ಎಂದು ಹೇಳಿದರು.

ಇನ್ನು ಸಿದ್ದರಾಮಯ್ಯ ಸಾಲ ಮಾಡಿದ್ದಾರೆ ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಆರ್ಥಿಕ ಹೊಣೆಗಾರಿಕೆ ಕಾಯ್ದೆಯನ್ನು ಬಿಜೆಪಿ ಸರಿಯಾಗಿ ಓದಿಕೊಳ್ಳಬೇಕು. ರಾಜ್ಯಗಳು ಆರ್ಥಿಕ ಸಂಕಷ್ಟದಲ್ಲಿದ್ದಾಗ 2002 ರಲ್ಲಿ ಜಾರಿಯಾದ ಈ ಕಾಯ್ದೆಯ ಪ್ರಕಾರ ಮೂರು ಮಾನದಂಡಗಳನ್ನು ಈಡೇರಿಸಬೇಕು. ಆರ್ಥಿಕ ಕೊರತೆ ಜಿಡಿಪಿಯ ಶೇ 3% ಒಳಗಿರಬೇಕು.33 ಲಕ್ಷದ 5500 ಲಕ್ಷ ಕೋಟಿ ಪೈಕಿ 25% ಸಾಲವಿರಬೇಕು. ಬಿಜೆಪಿ ಮತ್ತೊಮ್ಮೆ ಬಜೆಟ್ ಪುಸ್ಕತ ಓದಿಕೊಳ್ಳಲಿ. ಜಿ ಡಿ ಪಿ ಐ ಶೇಕಡ 25ಕ್ಕಿಂತ ಸಾಲ ಹೆಚ್ಚಾಗಬಾರದು. ನಮ್ಮ ಸಾಲ 24.94 ರಲ್ಲಿದೆ. ಹೀಗಾಗಿ ಸಾಲ ಮಿತಿಮೀರಿಲ್ಲ.

ಯಾವುದೇ ರಾಜ್ಯ ಸಿಕ್ಕಾಪಟ್ಟೆ ಸಾಲ ಮಾಡಲು ಸಾಧ್ಯವಿಲ್ಲ. ಇಷ್ಟೇ ಸಾಲ ಕೂಡಬೇಕೆಂದು ಕೇಂದ್ರ ಸರ್ಕಾರದ ಆರ್ಥಿಕ ಇಲಾಖೆ ನಿಗದಿ ಮಾಡುತ್ತದೆ. ಈ ವಿಷಯ ಬಿಜೆಪಿಗೆ ತಿಳಿದಿದೆಯೋ ಇಲ್ಲವೋ ಎನ್ನುವುದು ಗೊತ್ತಿಲ್ಲ. ಸಾಲ ಮಾಡಿದ್ದೇನೆ ಎನ್ನುವುದು ಹಸಿ ಸುಳ್ಳು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳನ್ನು ಮೀರಿಲ್ಲ. ಆರ್ಥಿಕ ಶಿಸ್ತು ಕಾಪಾಡಿಕೊಂಡಿದ್ದೇವೆ ಎಂದರು.

ಬಿಜೆಪಿಯಿಂದ ಉಚ್ಛಾಟಿತರಾಗಿರುವ ಶಾಸಕ ಯತ್ನಾಳ್ ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿದೆ. ಬಿಜೆಪಿಯವರು ಸೋಲಿನ ಭಯದಿಂದ ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಪ್ರತಿಪಕ್ಷಗಳ ಹೇಳಿಕೆಗಳಿಗೆ ನಾವು ಪ್ರತಿಕ್ರಿಯಿಸುವುದಿಲ್ಲ. ಸರ್ಕಾರದ ಕೆಲಸವನ್ನು ಜನರ ಮುಂದಿಡುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

1 hour ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

1 hour ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

2 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

2 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

2 hours ago