ರಾಜ್ಯ

ಹನುಮಧ್ವಜ ವಿಚಾರವಾಗಿ ಬಿಜೆಪಿ ಅನಗತ್ಯ ವಿವಾದ ಸೃಷ್ಟಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ. ಧ್ವಜ ವಿಚಾರವಾಗಿ ಬಿಜೆಪಿಯವರು ಅನಗತ್ಯವಾಗಿ ವಿವಾದ ಸೃಷ್ಠಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಲಲಿತ್ ಅಶೋಕ್ ನಲ್ಲಿ ಆಯೋಜಿಸಿದ್ದ GAFX ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಿಂದೂ ವಿರೋಧಿ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಅವರು, ಬಿಜೆಪಿಯವರು ಅನಗತ್ಯವಾಗಿ ವಿವಾದ ಹುಟ್ಟುಹಾಕ್ತಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ನೀಡುತ್ತಿದ್ದಾರೆ.

ಪ್ರಚೋದನೆ ಯಾಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದಾಗ, ಮುಖ್ಯಮಂತ್ರಿಗಳು ಚುನಾವಣೆ ಹತ್ತಿರ ಬರುತ್ತಿದ್ದು, ಅದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು. ಪಂಚಾಯತಿಯವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದಾರೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ ಎಂದರು.

ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

andolanait

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

6 hours ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

8 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

8 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

8 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

9 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

10 hours ago