ರಾಜ್ಯ

ಹನುಮಧ್ವಜ ವಿಚಾರವಾಗಿ ಬಿಜೆಪಿ ಅನಗತ್ಯ ವಿವಾದ ಸೃಷ್ಟಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ. ಧ್ವಜ ವಿಚಾರವಾಗಿ ಬಿಜೆಪಿಯವರು ಅನಗತ್ಯವಾಗಿ ವಿವಾದ ಸೃಷ್ಠಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಲಲಿತ್ ಅಶೋಕ್ ನಲ್ಲಿ ಆಯೋಜಿಸಿದ್ದ GAFX ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಿಂದೂ ವಿರೋಧಿ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಅವರು, ಬಿಜೆಪಿಯವರು ಅನಗತ್ಯವಾಗಿ ವಿವಾದ ಹುಟ್ಟುಹಾಕ್ತಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ನೀಡುತ್ತಿದ್ದಾರೆ.

ಪ್ರಚೋದನೆ ಯಾಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದಾಗ, ಮುಖ್ಯಮಂತ್ರಿಗಳು ಚುನಾವಣೆ ಹತ್ತಿರ ಬರುತ್ತಿದ್ದು, ಅದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು. ಪಂಚಾಯತಿಯವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದಾರೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ ಎಂದರು.

ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

andolanait

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ದೆಹಲಿ ಶೃಂಗ ಸಭೆ ಹೊರ ಹಾಕಿದ ಎಐ ಒಳನೋಟ

ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…

48 mins ago

ದ್ವಿತೀಯ ಪಿಯುಸಿ: 5, 255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…

52 mins ago

ಬೇಬಿ ಬೆಟ್ಟದ ಜಾತ್ರೆಯಲ್ಲಿ ಹಳ್ಳಿಕಾರ್ ದರ್ಬಾರ್!

ಎಸ್.ನಾಗಸುಂದರ್ ೫೦ ಸಾವಿರ ರೂ.ಗಳಿಂದ ೧೫ ಲಕ್ಷ ರೂ.ವರೆಗೆ ಬೆಲೆಬಾಳುವ ರಾಸುಗಳ ಪ್ರದರ್ಶನ ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಭಾರೀ…

58 mins ago

ಹೀಗೊಂದು ಬೆಕ್ಕಾಯಣ

ಭಾರತಿ ಬಿ.ವಿ. ಕದ್ದುಮುಚ್ಚಿ ನಮ್ಮ ಮನೆಯ ಗರಾಜಿಗೆ ಅಂಟಿದಂತಿದ್ದ ಕೋಣೆಯಲ್ಲಿ ಮರಿ ಹಾಕಿ ಬೀಡುಬಿಟ್ಟ ಮೊದಲಲ್ಲಿ ನಮಗೆ ಹೆದರುತ್ತಿದ್ದ ಬೆಕ್ಕು…

1 hour ago

ಜಾತಿಬೇಲಿಯ ಕಳಚಿಬಿಡುವ ಮಾರಿಹಬ್ಬಗಳು

ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ…

1 hour ago

‘ಗಾಡ್ ಫಾದರ್’ ಇಲ್ಲದೇ ಬರೆಯಲಾಗುವುದಿಲ್ಲವೇ?

ಅಕ್ಷತಾ ಏಕಲವ್ಯ ದ್ರೋಣರನ್ನು ಗುರುಗಳೆಂದು ಒಪ್ಪಿ, ಮರೆಯಲ್ಲೇ ನಿಂತು ಬಿಲ್ವಿದ್ಯೆ ಪ್ರವೀಣನಾದರೂ ದ್ರೋಣರು ಒಪ್ಪಿಕೊಂಡದ್ದು ಅರ್ಜುನನ ಮೇಲಿನ ಶಿಷ್ಯ ಪ್ರೀತಿಯನ್ನು!…

1 hour ago