ಬೆಂಗಳೂರು: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ. ಧ್ವಜ ವಿಚಾರವಾಗಿ ಬಿಜೆಪಿಯವರು ಅನಗತ್ಯವಾಗಿ ವಿವಾದ ಸೃಷ್ಠಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನ ಲಲಿತ್ ಅಶೋಕ್ ನಲ್ಲಿ ಆಯೋಜಿಸಿದ್ದ GAFX ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಿಂದೂ ವಿರೋಧಿ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಅವರು, ಬಿಜೆಪಿಯವರು ಅನಗತ್ಯವಾಗಿ ವಿವಾದ ಹುಟ್ಟುಹಾಕ್ತಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ನೀಡುತ್ತಿದ್ದಾರೆ.
ಪ್ರಚೋದನೆ ಯಾಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದಾಗ, ಮುಖ್ಯಮಂತ್ರಿಗಳು ಚುನಾವಣೆ ಹತ್ತಿರ ಬರುತ್ತಿದ್ದು, ಅದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು. ಪಂಚಾಯತಿಯವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದಾರೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ ಎಂದರು.
ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…