Mysore
22
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು.

ಬಿಜೆಪಿಗೆ ಸೋಲಿನ ಭಯ
ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಗಳನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ ಹಾಗೂ ಒಂದೂವರೆ ತಿಂಗಳು ಮಾತ್ರ ಸಿಎಂ ಅಧಿಕಾರದಲ್ಲಿರುತ್ತಾರೆ ಎಂಬ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸೋಮಣ್ಣ ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ. ಕ್ಷೇತ್ರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ ಎಂದರು.

ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಲು ಅವರೇನು ಕಾಂಗ್ರೆಸ್ ಹೈ ಕಮಾಂಡ್ ಅಲ್ಲ ಎಂದರು.

ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು
ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲಿಚ್ಚಿಸುವುದಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿವೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.

ಬಿಜೆಪಿ ದ್ವಂದ್ವ ನೀತಿ
ಪಕ್ಷದಿಂದ ಉಚ್ಛಾಟಿಸಲ್ಪಟ್ಟಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಗೋಗರೆದು ಕರೆ ತಂದು ಪ್ರಚಾರ ಕಾರ್ಯಕ್ಕೆ ಇಳಿಸಿದ್ದಾರೆ. ಇದು ಅವರ ದ್ವಂದ್ವ ನೀತಿ ಎಂದರಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸ್ಥಿತಿಯಲ್ಲಿದೆ ಎಂದರು.

 

Tags:
error: Content is protected !!