ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು.
ಬಿಜೆಪಿಗೆ ಸೋಲಿನ ಭಯ
ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಗಳನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ ಹಾಗೂ ಒಂದೂವರೆ ತಿಂಗಳು ಮಾತ್ರ ಸಿಎಂ ಅಧಿಕಾರದಲ್ಲಿರುತ್ತಾರೆ ಎಂಬ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸೋಮಣ್ಣ ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ. ಕ್ಷೇತ್ರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ ಎಂದರು.
ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಲು ಅವರೇನು ಕಾಂಗ್ರೆಸ್ ಹೈ ಕಮಾಂಡ್ ಅಲ್ಲ ಎಂದರು.
ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು
ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲಿಚ್ಚಿಸುವುದಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿವೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.
ಬಿಜೆಪಿ ದ್ವಂದ್ವ ನೀತಿ
ಪಕ್ಷದಿಂದ ಉಚ್ಛಾಟಿಸಲ್ಪಟ್ಟಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಗೋಗರೆದು ಕರೆ ತಂದು ಪ್ರಚಾರ ಕಾರ್ಯಕ್ಕೆ ಇಳಿಸಿದ್ದಾರೆ. ಇದು ಅವರ ದ್ವಂದ್ವ ನೀತಿ ಎಂದರಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸ್ಥಿತಿಯಲ್ಲಿದೆ ಎಂದರು.
ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…
ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…
ವಸಂತ್ ಕುಮಾರ್, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…