ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು.
ಬಿಜೆಪಿಗೆ ಸೋಲಿನ ಭಯ
ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಗಳನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ ಹಾಗೂ ಒಂದೂವರೆ ತಿಂಗಳು ಮಾತ್ರ ಸಿಎಂ ಅಧಿಕಾರದಲ್ಲಿರುತ್ತಾರೆ ಎಂಬ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸೋಮಣ್ಣ ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ. ಕ್ಷೇತ್ರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ ಎಂದರು.
ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಲು ಅವರೇನು ಕಾಂಗ್ರೆಸ್ ಹೈ ಕಮಾಂಡ್ ಅಲ್ಲ ಎಂದರು.
ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು
ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲಿಚ್ಚಿಸುವುದಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿವೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.
ಬಿಜೆಪಿ ದ್ವಂದ್ವ ನೀತಿ
ಪಕ್ಷದಿಂದ ಉಚ್ಛಾಟಿಸಲ್ಪಟ್ಟಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಗೋಗರೆದು ಕರೆ ತಂದು ಪ್ರಚಾರ ಕಾರ್ಯಕ್ಕೆ ಇಳಿಸಿದ್ದಾರೆ. ಇದು ಅವರ ದ್ವಂದ್ವ ನೀತಿ ಎಂದರಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸ್ಥಿತಿಯಲ್ಲಿದೆ ಎಂದರು.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…