ರಾಜ್ಯ

ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದಲ್ಲಿ ನಡೆದಿರುವ ಮತಗಳ್ಳತನದ ದಾಖಲೆಗಳನ್ನು, ಮತಗಳ್ಳತನದ ವ್ಯವಸ್ಥಿತ ಷಡ್ಯಂತ್ರ ಮತ್ತು ವ್ಯವಸ್ಥಿತ ಕಾರ್ಯತಂತ್ರದ ದಾಖಲೆಗಳನ್ನು ವಿವರಿಸಿ ಮಾತನಾಡಿದರು.

ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ ಎಂದರು.

ಬಿಜೆಪಿ ಮತಗಳ್ಳತನದ ಮೂಲಕ‌ ಅನೇಕ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಅಧಿಕಾರಕ್ಕೆ ಬಂದಿರುವುದು ಸ್ಪಷ್ಟವಾಗಿ ಗೊತ್ತಾಗಿದೆ. ಲೋಕಸಭೆ ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ನಿರಂತರ ಅಧ್ಯಯನ, ತಪಾಸಣೆ ಬಳಿಕ ದಾಖಲೆ ಸಮೇತ ಮತಗಳ್ಳತನವನ್ನು ದೇಶದ ಜನರಿಗೆ ಮನವರಿಕೆ ಮಾಡಿಸಿದ್ದಾರೆ ಎಂದು ವಿವರಿಸಿದರು.

ಇದನ್ನು ಓದಿ: ಡಿಸೆಂಬರ್.‌1ರಿಂದ 19ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ

ಸಂವಿಧಾನ ಬಾಹಿರವಾಗಿ ಅಧಿಕಾರ ಹಿಡಿಯುವುದು ಸಂವಿಧಾನಕ್ಕೆ ಎಸಗುವ ದ್ರೋಹ. ಪ್ರಜಾಪ್ರಭುತ್ವಕ್ಕೆ ಎಸಗಿದ ವಂಚನೆ. ರಾಹುಲ್ ಗಾಂಧಿಯವರು, ಬೆಂಗಳೂರು ಕೇಂದ್ರ ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನವನ್ನು ಸ್ಪಷ್ಟವಾಗಿ, ದಾಖಲೆ ಸಮೇತ ಬಯಲಿಗೆ ಎಳೆದು ದಾಖಲೆಗಳನ್ನು ದೇಶದ ಜನರ ಮುಂದೆ ಇಟ್ಟಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ, ದೇಶದ ಜನರ ಮುಂದೆ ಇರಿಸಿದ ದಾಖಲೆಗಳಿಗೂ ಉತ್ತರ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚುನಾವಣಾ ಆಯೋಗ ಸ್ವತಂತ್ರ ಸಂಸ್ಥೆಯ ಸ್ಥಾನಮಾನವನ್ನು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ನೀಡಿದ್ದಾರೆ. ಪ್ರಭುತ್ವ ಚುನಾವಣಾ ಪ್ರಕ್ರಿಯಿಯಲ್ಲಿ ಮೂಗು ತೂರಿಸಬಾರದು ಎನ್ನುವುದು ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು. ಅದಕ್ಕಾಗಿ ಮುಕ್ತ ಮತ್ತು ಪಾರದರ್ಶಕ ಚುನಾವಣಾ ವ್ಯವಸ್ಥೆಯನ್ನು ನಮ್ಮ ಸಂವಿಧಾನ ರೂಪಿಸಿದೆ. ಸಂವಿಧಾನದ ಮೌಲ್ಯ ಉಳಿಯಬೇಕಾದರೆ ಸ್ವತಂತ್ರ ಚುನಾವಣಾ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳುವುದು ಎಲ್ಲಾ ಪಕ್ಷಗಳ ಜವಾಬ್ದಾರಿ ಎಂದರು.

ಆದ್ದರಿಂದ ನಾವು ಸಂವಿಧಾನದ ಮತ್ತು ಪ್ತಜಾಪ್ರಭುತ್ವ ಕಾಪಾಡಲು ಕಾಂಗ್ರೆಸ್ ಪಕ್ಷದಿಂದ ಕೋಟಿಗೂ ಅಧಿಕ ಮಂದಿಯ ಸಹಿ ಸಂಗ್ರಹ ಮಾಡಲಾಗಿದೆ. ಇದನ್ನು ಚುನಾವಣಾ ಆಯೋಗ ಮತ್ತು ರಾಷ್ಟ್ರಪತಿಗಳಿಗೂ ನೀಡಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

42 mins ago

ಮಹದೇಶ್ವರ ಬೆಟ್ಟ | ಪಾದಯಾತ್ರೆ, ದ್ವಿಚಕ್ರ ವಾಹನಕ್ಕೆ ತಾತ್ಕಾಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…

1 hour ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

1 hour ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

2 hours ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

3 hours ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

3 hours ago