ರಾಜ್ಯ

ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದಲ್ಲಿ ನಡೆದಿರುವ ಮತಗಳ್ಳತನದ ದಾಖಲೆಗಳನ್ನು, ಮತಗಳ್ಳತನದ ವ್ಯವಸ್ಥಿತ ಷಡ್ಯಂತ್ರ ಮತ್ತು ವ್ಯವಸ್ಥಿತ ಕಾರ್ಯತಂತ್ರದ ದಾಖಲೆಗಳನ್ನು ವಿವರಿಸಿ ಮಾತನಾಡಿದರು.

ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ ಎಂದರು.

ಬಿಜೆಪಿ ಮತಗಳ್ಳತನದ ಮೂಲಕ‌ ಅನೇಕ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಅಧಿಕಾರಕ್ಕೆ ಬಂದಿರುವುದು ಸ್ಪಷ್ಟವಾಗಿ ಗೊತ್ತಾಗಿದೆ. ಲೋಕಸಭೆ ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ನಿರಂತರ ಅಧ್ಯಯನ, ತಪಾಸಣೆ ಬಳಿಕ ದಾಖಲೆ ಸಮೇತ ಮತಗಳ್ಳತನವನ್ನು ದೇಶದ ಜನರಿಗೆ ಮನವರಿಕೆ ಮಾಡಿಸಿದ್ದಾರೆ ಎಂದು ವಿವರಿಸಿದರು.

ಇದನ್ನು ಓದಿ: ಡಿಸೆಂಬರ್.‌1ರಿಂದ 19ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ

ಸಂವಿಧಾನ ಬಾಹಿರವಾಗಿ ಅಧಿಕಾರ ಹಿಡಿಯುವುದು ಸಂವಿಧಾನಕ್ಕೆ ಎಸಗುವ ದ್ರೋಹ. ಪ್ರಜಾಪ್ರಭುತ್ವಕ್ಕೆ ಎಸಗಿದ ವಂಚನೆ. ರಾಹುಲ್ ಗಾಂಧಿಯವರು, ಬೆಂಗಳೂರು ಕೇಂದ್ರ ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನವನ್ನು ಸ್ಪಷ್ಟವಾಗಿ, ದಾಖಲೆ ಸಮೇತ ಬಯಲಿಗೆ ಎಳೆದು ದಾಖಲೆಗಳನ್ನು ದೇಶದ ಜನರ ಮುಂದೆ ಇಟ್ಟಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ, ದೇಶದ ಜನರ ಮುಂದೆ ಇರಿಸಿದ ದಾಖಲೆಗಳಿಗೂ ಉತ್ತರ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚುನಾವಣಾ ಆಯೋಗ ಸ್ವತಂತ್ರ ಸಂಸ್ಥೆಯ ಸ್ಥಾನಮಾನವನ್ನು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ನೀಡಿದ್ದಾರೆ. ಪ್ರಭುತ್ವ ಚುನಾವಣಾ ಪ್ರಕ್ರಿಯಿಯಲ್ಲಿ ಮೂಗು ತೂರಿಸಬಾರದು ಎನ್ನುವುದು ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು. ಅದಕ್ಕಾಗಿ ಮುಕ್ತ ಮತ್ತು ಪಾರದರ್ಶಕ ಚುನಾವಣಾ ವ್ಯವಸ್ಥೆಯನ್ನು ನಮ್ಮ ಸಂವಿಧಾನ ರೂಪಿಸಿದೆ. ಸಂವಿಧಾನದ ಮೌಲ್ಯ ಉಳಿಯಬೇಕಾದರೆ ಸ್ವತಂತ್ರ ಚುನಾವಣಾ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳುವುದು ಎಲ್ಲಾ ಪಕ್ಷಗಳ ಜವಾಬ್ದಾರಿ ಎಂದರು.

ಆದ್ದರಿಂದ ನಾವು ಸಂವಿಧಾನದ ಮತ್ತು ಪ್ತಜಾಪ್ರಭುತ್ವ ಕಾಪಾಡಲು ಕಾಂಗ್ರೆಸ್ ಪಕ್ಷದಿಂದ ಕೋಟಿಗೂ ಅಧಿಕ ಮಂದಿಯ ಸಹಿ ಸಂಗ್ರಹ ಮಾಡಲಾಗಿದೆ. ಇದನ್ನು ಚುನಾವಣಾ ಆಯೋಗ ಮತ್ತು ರಾಷ್ಟ್ರಪತಿಗಳಿಗೂ ನೀಡಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

3 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

4 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

10 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

11 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

15 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

15 hours ago