ರಾಜ್ಯ

ಬೆಲೆ ಏರಿಕೆ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಡವರಿಗೆ ಬರೆ ಎಳೆಯುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ವಸ್ತುವಿನ ಬೆಲೆಯನ್ನು ಏರಿಕೆ ಮಾಡುತ್ತಲೇ ಬರುತ್ತಿದೆ. ಇದರಿಂದ ಜನಸಾಮಾನ್ಯರು ತೀವ್ರ ಸಂಕಷ್ಟ ಪಡುತ್ತಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಆದಷ್ಟು ಬೇಗ ಬೆಲೆಯನ್ನು ಇಳಿಕೆ ಮಾಡಬೇಕು. ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವ ಕೆಲಸವನ್ನು ಹೋರಾಟದ ಮುಖೇನ ಮಾಡುತ್ತೇವೆ ಎಂದರು.

ಈ ಹಿನ್ನೆಲೆಯಲ್ಲಿ ನಾಳೆಯಿಂದ ಜನಾಕ್ರೋಶ ಯಾತ್ರೆ ಆರಂಭವಾಗಲಿದ್ದು, ಮೊದಲಿಗೆ ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಯಾತ್ರೆಗೆ ಚಾಲನೆ ಸಿಗಲಿದೆ.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ನಾಳೆ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಮೈಸೂರು ಹಾಗೂ ಚಾಮರಾಜನಗರದಲ್ಲಿ ಯಾತ್ರೆ ಆರಂಭವಾಗಲಿದೆ.

ಯಾತ್ರೆಯುದ್ದಕ್ಕೂ ರಾಜ್ಯ ಸರ್ಕಾರಕ್ಕೆ ಚುರುಕು ಮುಟ್ಟಿಸುವ ಕೆಲಸ ಮಾಡಲಾಗುತ್ತದೆ. ಬೆಲೆ ಏರಿಕೆಯಿಂದ ಜನತೆಗೆ ಯಾವ ರೀತಿಯಲ್ಲಿ ತೊಂದರೆಯಾಗುತ್ತಿದೆ ಎಂಬುದನ್ನು ತಿಳಿಸಿ ಹೇಳಲಾಗುತ್ತದೆ.

ಈ ಮೂಲಕ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

6 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

8 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

17 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

17 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

17 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

17 hours ago