ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ಹೈಕಮಾಂಡ್ ನಿರ್ಧಾರ ಮಾಡಿದೆ. ಹೀಗಾಗಿ ವಿಜಯೇಂದ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕೆ ಮಾಡಿದರು.
ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದೇ ಈ ಜನಾಕ್ರೋಶ ಯಾತ್ರೆ ಮಾಡಿದರೆ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.
ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ವಿಫಲಗೊಳಿಸುವ ಏಕೈಕ ಉದ್ದೇಶದಿಂದ ರಾಜ್ಯದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಜೊತೆ ಶಾಮೀಲಾಗಿ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ತೆರಿಗೆ ಪಾಲು ಮತ್ತು ಅನುದಾನಕ್ಕೆ ಕತ್ತರಿ ಹಾಕಿಸಿದ್ದಾರೆ ಎಂದು ಗುಡುಗಿದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನತೆಗೆ ತುಂಬಾ ಉಪಯೋಗವಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಜನರು ಯೋಜನೆಯಿಂದ ತುಂಬಾ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…