ರಾಜ್ಯ

ಸದನದಲ್ಲಿ ಮುಡಾ, ವಾಲ್ಮೀಕಿ ಹಗರಣ ಹಸ್ತ್ರ ಪ್ರಯೋಗಕ್ಕೆ ಜೆಡಿಎಸ್-ಬಿಜೆಪಿ ಸಜ್ಜು

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಹಾಗೂ ವಾಲ್ಮೀಕಿ ಹಗರಣಗಳಿಂದಾಗಿ ನಮ್ಮ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿರುವುದಂತು ಸುಳ್ಳಲ್ಲ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಮೈತ್ರಿ ಪಕ್ಷಗಳು ಅಂದರೆ ಜೆಡಿಎಸ್‌ ಬಿಜೆಪಿ ರಾಜ್ಯ ಸರ್ಕಾರವನ್ನು ಕಟ್ಟಿಹಾಕೋದಿಕ್ಕೆ ಸಜ್ಜಾಗುತ್ತಿವೆ.

ಅದರಲ್ಲೂ ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಮುಂಗಾರು ಅಧಿವೇಶನದಲ್ಲಿಯೂ ಪ್ರಸ್ತಾಪ ಮಾಡಲು ಭರ್ಜರಿ ಯೋಜನೆ ರೂಪಿಸಿದೆ. ಜೊತೆಗೆ ನಿನ್ನೆ ಸಮನ್ವಯ ಸಭೆ ಮಾಡಿ ವಿಧಾನಸಭೆ ಮತ್ತು ವಿಧಾನಪರಿಷತ್‌ ನಲ್ಲಿ ಜಂಟಿ ಹೋರಾಟದ ಬಗ್ಗೆ ನಾಯಕರು ಚರ್ಚೆ ಮಾಡಿದ್ದಾರೆ.

ಮುಖ್ಯವಾಗಿ ಅಧಿವೇಶನದಲ್ಲಿ ಮುಡಾ ಸೈಟ್‌ ಪ್ರಕರಣ ಮತ್ತು ವಾಲ್ಮೀಕಿ ನಿಗಮದ ಹಗರಣ ತಾರ್ಕಿಕ ಅಂತ್ಯದವರೆಗೂ ಮುಂದುವರೆಸಲು ನಿರ್ಧಾರ ಮಾಡಲಾಗಿದೆ. ಇದರ ಜೊತೆಗೆ ಬೆಲೆ ಏರಿಕೆ, ಡೆಂಗ್ಯೂ, ಕಾನೂನು ಸುವ್ಯವಸ್ಥೆ ಮತ್ತೀತರ ವಿಷಯ ಆಯಾ ಸನ್ನಿವೇಶಕ್ಕೆ ತಕ್ಕಂತೆ ಪ್ರಸ್ತಾಪ ಮಾಡಲಿದೆ.

ಮುಖ್ಯವಾಗಿ ಸದನದ ಆರಂಭದಲ್ಲೆ ಪ್ರತಿಭಟನೆ ಮಾಡದೆ ವಿಪಕ್ಷವಾಗಿ ಪ್ರಸ್ತಾಪ ಮಾಡಬೇಕಿರುವ ಎಲ್ಲಾ ವಿಷಯಗಳನ್ನ ಪ್ರಸ್ತಾಪ ಮಾಡಿದ ಬಳಿಕ ಕೊನೆಯಲ್ಲಿ ಪ್ರತಿಭಟನೆ ಮಾಡಬೇಕು, ಮುಡಾ ಹಗರಣಕ್ಕೆ ಹೆಚ್ಚಿನ ಹೊತ್ತು ನೀಡಬೇಕು ಎಂದು ಸಭೆಯಲ್ಲಿ ನಿರ್ಧಾರ ಮಾಡಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಬಿಸಿಲ ಝಳಕ್ಕೆ ನೀರಿಗಿಳಿಯುವ ಮುನ್ನಇರಲಿ ಎಚ್ಚರ..!

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…

46 mins ago

ಹಾಲಿ-ಮಾಜಿ ಶಾಸಕರಿಗೆ ಕ್ಷೇತ್ರ ಪುನರ್‌ವಿಂಗಡಣೆ ಗುಮ್ಮ!

ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು  ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…

51 mins ago

150 ವರ್ಷಕ್ಕೆ ಸಾಕ್ಷಿಯಾದ ಸರ್ಕಾರಿ ಶಾಲೆ!

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…

56 mins ago

ಸರಸ್ವತಿಪುರಂ ಕಲ್ಯಾಣಿಗೆ ಪುನಶ್ಚೇತನ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…

1 hour ago

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ   ಪೆರಿಯಾರ್ ರಾಮಸ್ವಾಮಿ ಅವರ ಸೈದ್ಧಾಂತಿಕ ಉತ್ತರಾಧಿಕಾರಿ ಬೆಂಗಳೂರು: ಮೌಢ್ಯ…

1 hour ago