ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಹಾಗೂ ವಾಲ್ಮೀಕಿ ಹಗರಣಗಳಿಂದಾಗಿ ನಮ್ಮ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿರುವುದಂತು ಸುಳ್ಳಲ್ಲ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಮೈತ್ರಿ ಪಕ್ಷಗಳು ಅಂದರೆ ಜೆಡಿಎಸ್ ಬಿಜೆಪಿ ರಾಜ್ಯ ಸರ್ಕಾರವನ್ನು ಕಟ್ಟಿಹಾಕೋದಿಕ್ಕೆ ಸಜ್ಜಾಗುತ್ತಿವೆ.
ಅದರಲ್ಲೂ ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಮುಂಗಾರು ಅಧಿವೇಶನದಲ್ಲಿಯೂ ಪ್ರಸ್ತಾಪ ಮಾಡಲು ಭರ್ಜರಿ ಯೋಜನೆ ರೂಪಿಸಿದೆ. ಜೊತೆಗೆ ನಿನ್ನೆ ಸಮನ್ವಯ ಸಭೆ ಮಾಡಿ ವಿಧಾನಸಭೆ ಮತ್ತು ವಿಧಾನಪರಿಷತ್ ನಲ್ಲಿ ಜಂಟಿ ಹೋರಾಟದ ಬಗ್ಗೆ ನಾಯಕರು ಚರ್ಚೆ ಮಾಡಿದ್ದಾರೆ.
ಮುಖ್ಯವಾಗಿ ಅಧಿವೇಶನದಲ್ಲಿ ಮುಡಾ ಸೈಟ್ ಪ್ರಕರಣ ಮತ್ತು ವಾಲ್ಮೀಕಿ ನಿಗಮದ ಹಗರಣ ತಾರ್ಕಿಕ ಅಂತ್ಯದವರೆಗೂ ಮುಂದುವರೆಸಲು ನಿರ್ಧಾರ ಮಾಡಲಾಗಿದೆ. ಇದರ ಜೊತೆಗೆ ಬೆಲೆ ಏರಿಕೆ, ಡೆಂಗ್ಯೂ, ಕಾನೂನು ಸುವ್ಯವಸ್ಥೆ ಮತ್ತೀತರ ವಿಷಯ ಆಯಾ ಸನ್ನಿವೇಶಕ್ಕೆ ತಕ್ಕಂತೆ ಪ್ರಸ್ತಾಪ ಮಾಡಲಿದೆ.
ಮುಖ್ಯವಾಗಿ ಸದನದ ಆರಂಭದಲ್ಲೆ ಪ್ರತಿಭಟನೆ ಮಾಡದೆ ವಿಪಕ್ಷವಾಗಿ ಪ್ರಸ್ತಾಪ ಮಾಡಬೇಕಿರುವ ಎಲ್ಲಾ ವಿಷಯಗಳನ್ನ ಪ್ರಸ್ತಾಪ ಮಾಡಿದ ಬಳಿಕ ಕೊನೆಯಲ್ಲಿ ಪ್ರತಿಭಟನೆ ಮಾಡಬೇಕು, ಮುಡಾ ಹಗರಣಕ್ಕೆ ಹೆಚ್ಚಿನ ಹೊತ್ತು ನೀಡಬೇಕು ಎಂದು ಸಭೆಯಲ್ಲಿ ನಿರ್ಧಾರ ಮಾಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…