ರಾಜ್ಯ

ಮೈಸೂರು ಪಾದಯಾತ್ರೆ: ಎಚ್‌ಡಿಕೆ, ಬಿಎಸ್‌ವೈ ಸೇರಿದಂತೆ ಮೈತ್ರಿ ನಾಯಕರು ಹೇಳಿದ್ದಿಷ್ಟು?

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ಮೈಸೂರು ಚಲೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಬೆಂಗಳೂರಿನ ಕೆಂಗೇರಿಯ ಜೆಕೆ ಗ್ರ್ಯಾಂಡ್‌ ಅರೆನಾ ಸೆಂಟರ್‌ನಲ್ಲಿ ಮೈಸೂರು ಚಲೋ ಪಾದಯಾತ್ರೆಗೆ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಚಾಲನೆ ನೀಡಿದರು.

ಮೈಸೂರು ಮುಡಾದಲ್ಲಿ 50:50 ಅನುಪಾತದಲ್ಲಿ ನಡೆದಿದೆ ಎನ್ನಲಾದ ಅಕ್ರಮ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಅವರ ಕುಟುಂಬದಿಂದ ಅಕ್ರಮ ನಡೆದಿದೆ ಎಂದು ಮೈತ್ರ ಪಕ್ಷ ಆರೋಪಿಸಿದ್ದು, ಎಚ್‌ಡಿಕೆ, ಬಿಎಸ್‌ವೈ, ಆರ್‌ ಅಶೋಕ್‌ ಸೇರಿದಂತೆ ಹಿರಿಯ ನಾಯಕರು ಮೈಸೂರು ಚಲೋ ಬಗ್ಗೆ ಮಾತನಾಡಿದ್ದಾರೆ.

ಎಚ್‌ಡಿ ಕುಮಾರಸ್ವಾಮಿ: ರಾಜ್ಯ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಮೈತ್ರಿ ಪಕ್ಷಗಳು ಹೋರಾಟ ಮಾಡುತ್ತಿವೆ. ಈ ಹೋರಾಟಕ್ಕೆ ಕೇವಲ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು, ನಾಯಕರು ಮಾತ್ರ ಭಾಗಿಯಾಗಿಲ್ಲ. ಈ ಕೆಟ್ಟ ಸರ್ಕಾರ ಕಿತ್ತೊಗೆಯಲು ಜನರೇ ನಮಗೆ ಸಹಕಾರ ನೀಡುತ್ತಿದ್ದಾರೆ.

ಬಿಎಸ್‌ ಯಡಿಯೂರಪ್ಪ: ಮುಡಾ ಹಗರಣ ವಿರೋಧಿಸಿ ನಾವಿಂದು ಪಾದಯಾತ್ರೆ ಮಾಡುತ್ತಿದ್ದೇವೆ. ಈ ಪಾದಯಾತ್ರೆ ಮುಗಿಯುವುದರ ಒಳಗಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ. ಒಂದು ವೇಳೆ ಅವರು ನೀಡದೇ ಹೋದರೇ ನಮ್ಮ ಹೋರಾಟ ಮುಂದುವರೆಯಲಿದೆ.

ಆರ್‌. ಅಶೋಕ್‌: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ದಲಿತರ ಜಮೀನನ್ನು ಲೂಟಿ ಹೊಡೆದಿದ್ದಾರೆ. ಈ ಬಗ್ಗೆ ಮಾತನಾಡಲು ನಮಗೆ ಸದನದಲ್ಲಿಯೂ ಅವಕಾಶ ಮಾಡಿಕೊಡಲಿಲ್ಲ. ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದೇವೆ.

ಪ್ರಹ್ಲಾದ್‌ ಜೋಶಿ: ಭ್ರಷ್ಟಾಚಾರ ಎಂಬುದು ಕಾಂಗ್ರೆಸ್‌ ಡಿಎನ್‌ಎ ನಲ್ಲೇ ಇದೆ. ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ವಾಲ್ಮೀಕಿ, ಮುಡಾ ಹಗರಣ ಸೇರಿದಂತೆ ಎಲ್ಲಾ ಭ್ರಷ್ಟಾಚಾರಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ನಾಯಕರು ರಾಜ್ಯಪಾಲರಿಗೆ ಬೆದರಿಕೆ ಹಾಕುತ್ತಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನಿಹವಾಗಿದೆ.

ಬಿವೈ ವಿಜಯೇಂದ್ರ: ರಾಜ್ಯದಲ್ಲಿ ಹಣ ಲೂಟಿ ಹೊಡೆದು ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಕಟ್ಟಲು ರಾಜ್ಯ ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ಕಾಂಗ್ರೆಸ್‌ಗೆ ವಿರುದ್ಧ ನಿಲುವಳಿ ಮಂಡಿಸಿದಾಗಿನಿಂದ ಅವರಲ್ಲಿ ಭಯ ಉಂಟಾಗಿದೆ. ಪಾದಯಾತ್ರೆ ತಡೆಯಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅವರ ಗೊಡ್ಡು ಬೆದರಿಕೆಗೆ ನಾವು ಹೆದರುವುದಿಲ್ಲ. ಅವರಿಂದ ನಮ್ಮ ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

6 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

6 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

6 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

6 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

6 hours ago