ಗೋಕಾಕ್: ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಕಲ್ಲೋಳಿ ಗ್ರಾಮದಲ್ಲಿ ಇಂದು (ಆ.26) ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇಷ್ಟು ವರ್ಷ ಮಾಡದ ತಪ್ಪನ್ನು ಈಗ ಮಾಡ್ತೀನಾ? ನಾನು ಮಾಡದಿರುವ ತಪ್ಪನ್ನು ಷಡ್ಯಂತ್ರದಿಂದ ನನ್ನ ತಲೆಗೆ ಕಟ್ಟುವ ಪ್ರಯತ್ನ ಮಾಡ್ತಿದ್ದಾರೆ. ನಾವು-ನೀವು ಒಟ್ಟಾಗಿ ಈ ಷಡ್ಯಂತ್ರ ಸೋಲಿಸೋಣ. ಎಲ್ಲರೂ ಒಟ್ಟಾಗಿರಿ. 7 ಕೋಟಿ ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ನನ್ನನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದರು.
ಹಿಂದುಳಿದ ಸಮುದಾಯದಿಂದ ಬಂದು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿ-ಜೆಡಿಎಸ್ ಗೆ ಸಹಿಸಲು ಆಗುತ್ತಿಲ್ಲ. ಆದ್ದರಿಂದ ನಮಗಮ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ಕೊಡಬಾರದು. ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಬಡವರ, ಮಧ್ಯಮ ವರ್ಗದವರ ಪರವಾದ ಗ್ಯಾರಂಟಿ ಕಾರ್ಯಕ್ರಮಗಳು ಜಾರಿಯಲ್ಲಿದ್ದು ಸದಾ ನಮ್ಮ ನೆರವಿನ ಹಸ್ತ ಬಡವರ ಪರವಾಗಿ ಇರುತ್ತದೆ ಎಂದರು.
ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…