ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ವ್ಯಾಪಾರದ ಅಂಗಡಿಯಾಗಿದೆ. ಅಮೂಲಾಗ್ರ ಸುಧಾರಣೆ ತರಬೇಕು ಎಂದು ಬಿಜೆಪಿ-ಜೆಡಿಎಸ್ ಸದಸ್ಯರು ಆಗ್ರಹಿಸಿದ್ದಾರೆ.
ವಿಧಾನಪರಿಷತ್ನಲ್ಲಿ ಕೆಪಿಎಸ್ಸಿಯ ಕರ್ಮಕಾಂಡದ ಬಗ್ಗೆ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಮರಪರೀಕ್ಷೆಯಲ್ಲಿ ಹಲವಾರು ದೋಷಗಳಾಗಿವೆ. ಅದನ್ನು ರದ್ದುಮಾಡಿ ಮತ್ತೇ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.
ಕನ್ನಡ ಭಾಷಾಂತರದಲ್ಲಿ ಮೊದಲ ಬಾರಿ 72 ತಪ್ಪುಗಳಾದರೆ, ಎರಡನೇ ಬಾರಿ 59 ಭಾಷಾಂತರ ದೋಷಗಳಾಗಿವೆ. ಇದರಿಂದ ಕನ್ನಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಜೊತೆಗೆ ಸರ್ಕಾರದ ಹಣ ಹಾಗೂ ವಿದ್ಯಾರ್ಥಿಗಳ ಸಮಯ ವ್ಯರ್ಥವಾಗಿದೆ ಎಂದು ತಿಳಸಿದರು.
ಕೆಪಿಎಸ್ಸಿಯಲ್ಲಿ ಹೆಚ್ಚು ಹಣ ಕೊಟ್ಟವರಿಗೆ ಹುದ್ದೆ ಸಿಗುತ್ತದೆ. ಪ್ರತಿಭಾವಂತರಿಗೆ ಅನ್ಯಾಯವಾಗಿದೆ. ತಪ್ಪಿತಸ್ತರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…