ಬೆಂಗಳೂರು : ಇದೇ ತಿಂಗಳ 18 ರಂದು ನಡೆಯಲಿರುವ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಎನ್ಡಿಎ ಮೈತ್ರಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ನಲ್ಲಿ ತೀವ್ರ ಪೈಪೋಟಿ ಆರಂಭಗೊಂಡಿದೆ.
ರಾಜ್ಯಸಭೆಯ 4 ಹಾಗೂ ವಿಧಾನಪರಿಷ್ನ 7 ಸ್ಥಾನಗಳಿಗೆ ಜೂ.18 ರಂದು ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.
ಒಂದು ವೇಳೆ ಅವಿರೋಧವಾಗಿ ಆಯ್ಕೆಯಾದರೆ ಚುನಾವಣೆ ನಡೆಸುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಮೂರು ಪಕ್ಷಗಳಿಂದ ಅಡ್ಡಮತದಾನ ನಡೆಯಬಹುದೆಂಬ ಭೀತಿಯಿಂದಾಗಿ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ತೀರಾ ಕಡಿಮೆ.
ವಿಧಾನಸಭೆ ಬಲಾಬಲ ಪ್ರಕಾರ, ಎನ್ಡಿಎ ಮೈತ್ರಿಕೂಟಕ್ಕೆ ರಾಜ್ಯಸಭೆ ಚುನಾವಣೆಯಲ್ಲಿ 1 ಸ್ಥಾನ ಹಾಗೂ ವಿಧಾನಪರಿಷತ್ನಲ್ಲಿ 2 ಸ್ಥಾನ ದಕ್ಕಲಿವೆ. ಆಡಳಿತಾರೂಢ ಕಾಂಗ್ರೆಸ್ ಭಾರಿ ಬಹುಮತ ಪಡೆದಿರುವ ಕಾರಣ ರಾಜ್ಯಸಭೆಯಲ್ಲಿ 3 ಹಾಗೂ ವಿಧಾನಪರಿಷತ್ನ 7 ಸ್ಥಾನಗಳ ಪೈಕಿ 5 ಸ್ಥಾನಗಳನ್ನು ನಿರಾಯಾಸವಾಗಿ ಗೆಲ್ಲಲಿದೆ.
ಬಿಜೆಪಿಯಿಂದ ರಾಜ್ಯಸಭೆ ಸದಸ್ಯರಾದ ಈರಣ್ಣ ಕಡಾಡಿ, ನಾರಾಯಣ ಸಾ ಭಾಂಡಗೆ ಹಾಗೂ ಜೆಡಿಎಸ್ ನಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ನಿವೃತ್ತರಾಗಲಿದ್ದಾರೆ. ರಾಜ್ಯಸಭೆಗೆ ಆಯ್ಕೆಯಾಗಲು ಓರ್ವ ಅಭ್ಯರ್ಥಿ 45 ಮತಗಳನ್ನು ಪಡೆಯಬೇಕು. ಬಿಜೆಪಿ, ಜೆಡಿಎಸ್ ಎರಡೂ ಪಕ್ಷಗಳು ಮೈತ್ರಿಯಾಗಿರುವುದರಿಂದ 1 ಸ್ಥಾನವನ್ನು ಪಡೆಯಲಷ್ಟೆ ಶಕ್ತವಾಗಿದೆ.
ಈ ಕ್ಷಣದವರೆಗೂ ನಡೆದಿರುವ ರಾಜಕೀಯ ಬೆಳವಣಿಗೆಗಳ ಪ್ರಕಾರ, ರಾಜ್ಯಸಭೆಗೆ ಬಿಜೆಪಿ ಯಾರನ್ನು ಆಯ್ಕೆ ಮಾಡಬೇಕು ಎಂಬ ಗೊಂದಲದಲ್ಲೆ ಇದೆ. 2 ದಿನಗಳ ಹಿಂದೆ ದೆಹಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೆರಳಿ ಪಕ್ಷದ ವರಿಷ್ಠರ ಜೊತೆ ಮಾತುಕತೆ ನಡೆಸಿದ್ದಾರೆ. ರಾಜ್ಯ ಕೋರ್ಕಮಿಟಿಯಲ್ಲಿ ಏನೇ ಚರ್ಚೆ ನಡೆದರೂ ದೆಹಲಿ ನಾಯಕರ ಆಯ್ಕೆಯೇ ಅಂತಿಮವಾಗುವುದರಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸ್ಥಳೀಯ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಬಿಜೆಪಿಯಲ್ಲಿ ಒಂದು ಬಣ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಅಭ್ಯರ್ಥಿ ಮಾಡಬೇಕೆಂದು ಒಲವು ತೋರಿದ್ದರೆ, ಮತ್ತೊಂದು ಬಣ ದೇವೇಗೌಡರಿಗೆ ಬೆಂಬಲ ನೀಡಿದರೆ ಮೈತ್ರಿಕೂಟಕ್ಕೆ ಹೆಚ್ಚಿನ ಬಲ ಬರುತ್ತದೆ ಎಂಬ ವಾದವನ್ನು ಮುಂದಿಟ್ಟಿದ್ದಾರೆ.
ದೇವೇಗೌಡರನ್ನು ಕರ್ನಾಟಕದ ಬದಲು ಅಸ್ಸಾಂ ಇಲ್ಲವೇ, ಮಹಾರಾಷ್ಟ್ರದಿಂದ ಸ್ಪರ್ಧೆಗಿಳಿಸಬೇಕೆಂಬ ಬೇಡಿಕೆಯೂ ಇದೆ. ಈ ಎರಡೂ ರಾಜ್ಯಗಳಲ್ಲಿ ಎನ್ಡಿಎ ಆಡಳಿತ ಇರುವುದರಿಂದ ಗೌಡರು ಸುಲಭವಾಗಿ ಗೆದ್ದು ಬರುತ್ತಾರೆ. ಕರ್ನಾಟಕದಲ್ಲಿ 1 ಸ್ಥಾನ ತಮಗೆ ದಕ್ಕಲಿದೆ ಎಂಬುದು ಬಿಜೆಪಿ ಲೆಕ್ಕಾಚಾರ. ಹೀಗಾಗಿ ದೇವೇಗೌಡರನ್ನು ಅಸ್ಸಾಂನಿಂದ ಹಾಗೂ ಸದಾನಂದಗೌಡ ಅವರನ್ನು ಕರ್ನಾಟಕದಿಂದಲೇ ಕಣಕ್ಕಿಳಿಸುವ ಬಗ್ಗೆ ಪಕ್ಷದೊಳಗೆ ಪರ-ವಿರೋಧ ಚರ್ಚೆಯಾಗಿದೆ. ವಿಧಾನಪರಿಷತ್ಗೆ 2 ಸ್ಥಾನಗಳು ಗೆಲ್ಲಲು ಸಾಧ್ಯವಿರುವುದರಿಂದ ಪಕ್ಷ ನಿಷ್ಠರಿಗೆ ಟಿಕೆಟ್ ಕೊಡಬೇಕೆಂಬ ಆಗ್ರಹ ಕೇಳಿಬಂದಿದೆ.
ಈಗಾಗಲೇ ಒಂದು ಅವಧಿಗೆ ಆಯ್ಕೆಯಾಗಿರುವವರನ್ನು ಪುನಃ ಮತ್ತೊಂದು ಅವಧಿಗೆ ಆಯ್ಕೆ ಮಾಡದೇ 2028 ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕೆಂಬ ಅಭಿಪ್ರಾಯ ಪಕ್ಷದೊಳಗೆ ಕೇಳಿಬರುತ್ತಿದೆ.
ನವದೆಹಲಿ: ಸುಪ್ರೀಂಕೋರ್ಟ್ಗೆ ಐವರು ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ. ನ್ಯಾಯಮೂರ್ತಿಗಳಾಗಿ ನ್ಯಾ.ವೆಂಕಿಟ ಸುಬ್ರಮಣಿ ಮೋಹನ, ನ್ಯಾ.ಚಂದ್ರಶೇಖರ್ (ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ),…
ಬೆಂಗಳೂರು: ದೇಶದಲ್ಲಿ ಚಿನ್ನದ ಖರೀದಿ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಇದರ ಪರಿಣಾಮವಾಗಿ ಚಿನ್ನದ ಆಮದು ಪ್ರಮಾಣದಲ್ಲೂ ಭಾರೀ ಇಳಿಕೆ ಕಂಡುಬಂದಿದೆ.…
ರಾಜ್ಯ ರಾಜಕಾರಣ ಮಗ್ಗಲು ಬದಲಿಸಿದೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಬಂದು ಕೂರುವ ಬೆಳವಣಿಗೆಯೊಂದಿಗೆ ರಾಜ್ಯ ರಾಜಕಾರಣದ…
ಕರ್ನಾಟಕದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿ, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ…
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…