ಬೆಂಗಳೂರು : ಇದೇ ತಿಂಗಳ 18 ರಂದು ನಡೆಯಲಿರುವ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಎನ್ಡಿಎ ಮೈತ್ರಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ನಲ್ಲಿ ತೀವ್ರ ಪೈಪೋಟಿ ಆರಂಭಗೊಂಡಿದೆ.
ರಾಜ್ಯಸಭೆಯ 4 ಹಾಗೂ ವಿಧಾನಪರಿಷ್ನ 7 ಸ್ಥಾನಗಳಿಗೆ ಜೂ.18 ರಂದು ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.
ಒಂದು ವೇಳೆ ಅವಿರೋಧವಾಗಿ ಆಯ್ಕೆಯಾದರೆ ಚುನಾವಣೆ ನಡೆಸುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಮೂರು ಪಕ್ಷಗಳಿಂದ ಅಡ್ಡಮತದಾನ ನಡೆಯಬಹುದೆಂಬ ಭೀತಿಯಿಂದಾಗಿ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ತೀರಾ ಕಡಿಮೆ.
ವಿಧಾನಸಭೆ ಬಲಾಬಲ ಪ್ರಕಾರ, ಎನ್ಡಿಎ ಮೈತ್ರಿಕೂಟಕ್ಕೆ ರಾಜ್ಯಸಭೆ ಚುನಾವಣೆಯಲ್ಲಿ 1 ಸ್ಥಾನ ಹಾಗೂ ವಿಧಾನಪರಿಷತ್ನಲ್ಲಿ 2 ಸ್ಥಾನ ದಕ್ಕಲಿವೆ. ಆಡಳಿತಾರೂಢ ಕಾಂಗ್ರೆಸ್ ಭಾರಿ ಬಹುಮತ ಪಡೆದಿರುವ ಕಾರಣ ರಾಜ್ಯಸಭೆಯಲ್ಲಿ 3 ಹಾಗೂ ವಿಧಾನಪರಿಷತ್ನ 7 ಸ್ಥಾನಗಳ ಪೈಕಿ 5 ಸ್ಥಾನಗಳನ್ನು ನಿರಾಯಾಸವಾಗಿ ಗೆಲ್ಲಲಿದೆ.
ಬಿಜೆಪಿಯಿಂದ ರಾಜ್ಯಸಭೆ ಸದಸ್ಯರಾದ ಈರಣ್ಣ ಕಡಾಡಿ, ನಾರಾಯಣ ಸಾ ಭಾಂಡಗೆ ಹಾಗೂ ಜೆಡಿಎಸ್ ನಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ನಿವೃತ್ತರಾಗಲಿದ್ದಾರೆ. ರಾಜ್ಯಸಭೆಗೆ ಆಯ್ಕೆಯಾಗಲು ಓರ್ವ ಅಭ್ಯರ್ಥಿ 45 ಮತಗಳನ್ನು ಪಡೆಯಬೇಕು. ಬಿಜೆಪಿ, ಜೆಡಿಎಸ್ ಎರಡೂ ಪಕ್ಷಗಳು ಮೈತ್ರಿಯಾಗಿರುವುದರಿಂದ 1 ಸ್ಥಾನವನ್ನು ಪಡೆಯಲಷ್ಟೆ ಶಕ್ತವಾಗಿದೆ.
ಈ ಕ್ಷಣದವರೆಗೂ ನಡೆದಿರುವ ರಾಜಕೀಯ ಬೆಳವಣಿಗೆಗಳ ಪ್ರಕಾರ, ರಾಜ್ಯಸಭೆಗೆ ಬಿಜೆಪಿ ಯಾರನ್ನು ಆಯ್ಕೆ ಮಾಡಬೇಕು ಎಂಬ ಗೊಂದಲದಲ್ಲೆ ಇದೆ. 2 ದಿನಗಳ ಹಿಂದೆ ದೆಹಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೆರಳಿ ಪಕ್ಷದ ವರಿಷ್ಠರ ಜೊತೆ ಮಾತುಕತೆ ನಡೆಸಿದ್ದಾರೆ. ರಾಜ್ಯ ಕೋರ್ಕಮಿಟಿಯಲ್ಲಿ ಏನೇ ಚರ್ಚೆ ನಡೆದರೂ ದೆಹಲಿ ನಾಯಕರ ಆಯ್ಕೆಯೇ ಅಂತಿಮವಾಗುವುದರಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸ್ಥಳೀಯ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಬಿಜೆಪಿಯಲ್ಲಿ ಒಂದು ಬಣ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಅಭ್ಯರ್ಥಿ ಮಾಡಬೇಕೆಂದು ಒಲವು ತೋರಿದ್ದರೆ, ಮತ್ತೊಂದು ಬಣ ದೇವೇಗೌಡರಿಗೆ ಬೆಂಬಲ ನೀಡಿದರೆ ಮೈತ್ರಿಕೂಟಕ್ಕೆ ಹೆಚ್ಚಿನ ಬಲ ಬರುತ್ತದೆ ಎಂಬ ವಾದವನ್ನು ಮುಂದಿಟ್ಟಿದ್ದಾರೆ.
ದೇವೇಗೌಡರನ್ನು ಕರ್ನಾಟಕದ ಬದಲು ಅಸ್ಸಾಂ ಇಲ್ಲವೇ, ಮಹಾರಾಷ್ಟ್ರದಿಂದ ಸ್ಪರ್ಧೆಗಿಳಿಸಬೇಕೆಂಬ ಬೇಡಿಕೆಯೂ ಇದೆ. ಈ ಎರಡೂ ರಾಜ್ಯಗಳಲ್ಲಿ ಎನ್ಡಿಎ ಆಡಳಿತ ಇರುವುದರಿಂದ ಗೌಡರು ಸುಲಭವಾಗಿ ಗೆದ್ದು ಬರುತ್ತಾರೆ. ಕರ್ನಾಟಕದಲ್ಲಿ 1 ಸ್ಥಾನ ತಮಗೆ ದಕ್ಕಲಿದೆ ಎಂಬುದು ಬಿಜೆಪಿ ಲೆಕ್ಕಾಚಾರ. ಹೀಗಾಗಿ ದೇವೇಗೌಡರನ್ನು ಅಸ್ಸಾಂನಿಂದ ಹಾಗೂ ಸದಾನಂದಗೌಡ ಅವರನ್ನು ಕರ್ನಾಟಕದಿಂದಲೇ ಕಣಕ್ಕಿಳಿಸುವ ಬಗ್ಗೆ ಪಕ್ಷದೊಳಗೆ ಪರ-ವಿರೋಧ ಚರ್ಚೆಯಾಗಿದೆ. ವಿಧಾನಪರಿಷತ್ಗೆ 2 ಸ್ಥಾನಗಳು ಗೆಲ್ಲಲು ಸಾಧ್ಯವಿರುವುದರಿಂದ ಪಕ್ಷ ನಿಷ್ಠರಿಗೆ ಟಿಕೆಟ್ ಕೊಡಬೇಕೆಂಬ ಆಗ್ರಹ ಕೇಳಿಬಂದಿದೆ.
ಈಗಾಗಲೇ ಒಂದು ಅವಧಿಗೆ ಆಯ್ಕೆಯಾಗಿರುವವರನ್ನು ಪುನಃ ಮತ್ತೊಂದು ಅವಧಿಗೆ ಆಯ್ಕೆ ಮಾಡದೇ 2028 ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕೆಂಬ ಅಭಿಪ್ರಾಯ ಪಕ್ಷದೊಳಗೆ ಕೇಳಿಬರುತ್ತಿದೆ.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…