ರಾಜ್ಯ

ರಾಜ್ಯಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್‌ನಲ್ಲಿ ತೀವ್ರ ಪೈಪೋಟಿ

ಬೆಂಗಳೂರು : ಇದೇ ತಿಂಗಳ 18 ರಂದು ನಡೆಯಲಿರುವ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಎನ್‍ಡಿಎ ಮೈತ್ರಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ತೀವ್ರ ಪೈಪೋಟಿ ಆರಂಭಗೊಂಡಿದೆ.
ರಾಜ್ಯಸಭೆಯ 4 ಹಾಗೂ ವಿಧಾನಪರಿಷ್‍ನ 7 ಸ್ಥಾನಗಳಿಗೆ ಜೂ.18 ರಂದು ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.

ಒಂದು ವೇಳೆ ಅವಿರೋಧವಾಗಿ ಆಯ್ಕೆಯಾದರೆ ಚುನಾವಣೆ ನಡೆಸುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಮೂರು ಪಕ್ಷಗಳಿಂದ ಅಡ್ಡಮತದಾನ ನಡೆಯಬಹುದೆಂಬ ಭೀತಿಯಿಂದಾಗಿ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ತೀರಾ ಕಡಿಮೆ.

ವಿಧಾನಸಭೆ ಬಲಾಬಲ ಪ್ರಕಾರ, ಎನ್‍ಡಿಎ ಮೈತ್ರಿಕೂಟಕ್ಕೆ ರಾಜ್ಯಸಭೆ ಚುನಾವಣೆಯಲ್ಲಿ 1 ಸ್ಥಾನ ಹಾಗೂ ವಿಧಾನಪರಿಷತ್‍ನಲ್ಲಿ 2 ಸ್ಥಾನ ದಕ್ಕಲಿವೆ. ಆಡಳಿತಾರೂಢ ಕಾಂಗ್ರೆಸ್ ಭಾರಿ ಬಹುಮತ ಪಡೆದಿರುವ ಕಾರಣ ರಾಜ್ಯಸಭೆಯಲ್ಲಿ 3 ಹಾಗೂ ವಿಧಾನಪರಿಷತ್‍ನ 7 ಸ್ಥಾನಗಳ ಪೈಕಿ 5 ಸ್ಥಾನಗಳನ್ನು ನಿರಾಯಾಸವಾಗಿ ಗೆಲ್ಲಲಿದೆ.

ಬಿಜೆಪಿಯಿಂದ ರಾಜ್ಯಸಭೆ ಸದಸ್ಯರಾದ ಈರಣ್ಣ ಕಡಾಡಿ, ನಾರಾಯಣ ಸಾ ಭಾಂಡಗೆ ಹಾಗೂ ಜೆಡಿಎಸ್ ನಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ನಿವೃತ್ತರಾಗಲಿದ್ದಾರೆ. ರಾಜ್ಯಸಭೆಗೆ ಆಯ್ಕೆಯಾಗಲು ಓರ್ವ ಅಭ್ಯರ್ಥಿ 45 ಮತಗಳನ್ನು ಪಡೆಯಬೇಕು. ಬಿಜೆಪಿ, ಜೆಡಿಎಸ್ ಎರಡೂ ಪಕ್ಷಗಳು ಮೈತ್ರಿಯಾಗಿರುವುದರಿಂದ 1 ಸ್ಥಾನವನ್ನು ಪಡೆಯಲಷ್ಟೆ ಶಕ್ತವಾಗಿದೆ.

ಈ ಕ್ಷಣದವರೆಗೂ ನಡೆದಿರುವ ರಾಜಕೀಯ ಬೆಳವಣಿಗೆಗಳ ಪ್ರಕಾರ, ರಾಜ್ಯಸಭೆಗೆ ಬಿಜೆಪಿ ಯಾರನ್ನು ಆಯ್ಕೆ ಮಾಡಬೇಕು ಎಂಬ ಗೊಂದಲದಲ್ಲೆ ಇದೆ. 2 ದಿನಗಳ ಹಿಂದೆ ದೆಹಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೆರಳಿ ಪಕ್ಷದ ವರಿಷ್ಠರ ಜೊತೆ ಮಾತುಕತೆ ನಡೆಸಿದ್ದಾರೆ. ರಾಜ್ಯ ಕೋರ್‍ಕಮಿಟಿಯಲ್ಲಿ ಏನೇ ಚರ್ಚೆ ನಡೆದರೂ ದೆಹಲಿ ನಾಯಕರ ಆಯ್ಕೆಯೇ ಅಂತಿಮವಾಗುವುದರಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸ್ಥಳೀಯ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಬಿಜೆಪಿಯಲ್ಲಿ ಒಂದು ಬಣ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಅಭ್ಯರ್ಥಿ ಮಾಡಬೇಕೆಂದು ಒಲವು ತೋರಿದ್ದರೆ, ಮತ್ತೊಂದು ಬಣ ದೇವೇಗೌಡರಿಗೆ ಬೆಂಬಲ ನೀಡಿದರೆ ಮೈತ್ರಿಕೂಟಕ್ಕೆ ಹೆಚ್ಚಿನ ಬಲ ಬರುತ್ತದೆ ಎಂಬ ವಾದವನ್ನು ಮುಂದಿಟ್ಟಿದ್ದಾರೆ.

ದೇವೇಗೌಡರನ್ನು ಕರ್ನಾಟಕದ ಬದಲು ಅಸ್ಸಾಂ ಇಲ್ಲವೇ, ಮಹಾರಾಷ್ಟ್ರದಿಂದ ಸ್ಪರ್ಧೆಗಿಳಿಸಬೇಕೆಂಬ ಬೇಡಿಕೆಯೂ ಇದೆ. ಈ ಎರಡೂ ರಾಜ್ಯಗಳಲ್ಲಿ ಎನ್‍ಡಿಎ ಆಡಳಿತ ಇರುವುದರಿಂದ ಗೌಡರು ಸುಲಭವಾಗಿ ಗೆದ್ದು ಬರುತ್ತಾರೆ. ಕರ್ನಾಟಕದಲ್ಲಿ 1 ಸ್ಥಾನ ತಮಗೆ ದಕ್ಕಲಿದೆ ಎಂಬುದು ಬಿಜೆಪಿ ಲೆಕ್ಕಾಚಾರ. ಹೀಗಾಗಿ ದೇವೇಗೌಡರನ್ನು ಅಸ್ಸಾಂನಿಂದ ಹಾಗೂ ಸದಾನಂದಗೌಡ ಅವರನ್ನು ಕರ್ನಾಟಕದಿಂದಲೇ ಕಣಕ್ಕಿಳಿಸುವ ಬಗ್ಗೆ ಪಕ್ಷದೊಳಗೆ ಪರ-ವಿರೋಧ ಚರ್ಚೆಯಾಗಿದೆ. ವಿಧಾನಪರಿಷತ್‍ಗೆ 2 ಸ್ಥಾನಗಳು ಗೆಲ್ಲಲು ಸಾಧ್ಯವಿರುವುದರಿಂದ ಪಕ್ಷ ನಿಷ್ಠರಿಗೆ ಟಿಕೆಟ್ ಕೊಡಬೇಕೆಂಬ ಆಗ್ರಹ ಕೇಳಿಬಂದಿದೆ.

ಈಗಾಗಲೇ ಒಂದು ಅವಧಿಗೆ ಆಯ್ಕೆಯಾಗಿರುವವರನ್ನು ಪುನಃ ಮತ್ತೊಂದು ಅವಧಿಗೆ ಆಯ್ಕೆ ಮಾಡದೇ 2028 ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕೆಂಬ ಅಭಿಪ್ರಾಯ ಪಕ್ಷದೊಳಗೆ ಕೇಳಿಬರುತ್ತಿದೆ.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

5 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

5 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

7 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

7 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

7 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

15 hours ago