ಬೆಂಗಳೂರು: ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಪ್ರತಿಯಾಗಿ ನಾವು ಜನರಿಗೆ ಏನು ತಿಳಿಸಬೇಕು ಅದನ್ನು ಸಮಾವೇಶಗಳ ಮೂಲಕ ತಿಳಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಪಾತ್ರವಿದೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್ ನಾಯಕರು ಬೆಂಗಳೂರಿನಿಂದ ಮೈಸೂರಿಗೆ ಆಗಸ್ಟ್.3ರಿಂದ 7 ದಿನ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಪಾದಯಾತ್ರೆಯಿಂದ ಜನರಿಗೆ ತೊಂದರೆಯಾದರೆ ಸುಮ್ಮನಿರಲ್ಲ. ಕಾನೂನು ಬಾಹಿರ ಕೆಲಸ ಮಾಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಡಿಕೆಶಿ ಸೂಚನೆ ಮೇರೆಗೆ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮಗೆ ಬುದ್ದಿ ಹೇಳುವ ಮೊದಲು ಅವರು ತಮ್ಮ ಮನೆಯನ್ನು ಸರಿಮಾಡಿಕೊಳ್ಳಲಿ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪಾದಯಾತ್ರೆಯಿಂದ ಏನೂ ಪ್ರಯೋಜನವಿಲ್ಲ. ಸುಖಾಸುಮ್ಮನೆ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.
ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್ಸಿ…
ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…
ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…
ಹೊಸದಿಲ್ಲಿ : ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ…
ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು,…
ಮೈಸೂರು : ಮೈಸೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಕೇಳಿ ಬಂದಿದ್ದು, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಸರ್ಕಾರದ…