ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ವತಿಯಿಂದ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದೆ.
ಇಂದು ಬೆಳಿಗ್ಗೆ ಶುರುವಾದ ಪಾದಯಾತ್ರೆ, ಬಿಡದಿಯಿಂದ ರಾಮನಗರದ ಕೆಂಗಲ್ವರೆಗೆ ಸುಮಾರು 22 ಕಿ.ಮೀವರೆಗೆ ಸಾಗಲಿದೆ. ರಾಮನಗರದಲ್ಲಿ ಸಂಜೆ ವೇಳೆಗೆ ಬಿಜೆಪಿ-ಜೆಡಿಎಸ್ ನಾಯಕರು ಸಾರ್ವಜನಿಕ ಸಭೆ ನಡೆಸಲಿದ್ದಾರೆ.
ಪಾದಯಾತ್ರೆ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಮ್ಮ ಪಾದಯಾತ್ರೆ ನೋಡಿ ಆಡಳಿತ ಪಕ್ಷ ಕಾಂಗ್ರೆಸ್ ಗಾಬರಿಯಾಗಿದೆ. ರಾಜ್ಯದ ಜನರ ಪರ ನಾವು ಸರ್ಕಾರಕ್ಕೆ ಪ್ರಶ್ನೆ ಕೇಳುತ್ತಿದ್ದೇವೆ. ನಮ್ಮ ಪ್ರಶ್ನೆಗಳಿಗೆ ಸಿಎಂ ಹಾಗೂ ಡಿಸಿಎಂ ಇಬ್ಬರೂ ತಕ್ಕ ಉತ್ತರ ಕೊಡಬೇಕು. ಉತ್ತರ ಕೊಡುವ ಬದಲು ಬೆದರಿಕೆ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯ ಸರ್ಕಾರದಲ್ಲಿ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ಘಟನೆಗಳು ಸಂಭವಿಸುತ್ತಲೇ ಇವೆ. ಇದಕ್ಕೆಲ್ಲಾ ಯಾರು ಹೊಣೆ. ಈ ಬಗ್ಗೆ ಸೂಕ್ತ ತನಿಖೆ ಆಗಲೇಬೇಕು. ಸರ್ಕಾರದಲ್ಲಿ ನಿರಂತರವಾಗಿ ವರ್ಗಾವಣೆ ದಂಧೆಯೂ ನಡೆಯುತ್ತಿದೆ ಎಂದು ಕಿಡಿಕಾರಿದರು.
ಹಗರಣಗಳ ಬಗ್ಗೆ ಸೂಕ್ತ ಉತ್ತರ ನಮಗೆ ಬೇಕಿದೆ. ಸಿಎಂ ಹಾಗೂ ಡಿಸಿಎಂ ಇಬ್ಬರೂ ಸೇರಿ ನಮಗೆ ಉತ್ತರ ಕೊಡಬೇಕು. ಆ ವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಎಚ್ಚರಿಕೆ ನೀಡಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…