ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ವತಿಯಿಂದ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದೆ.
ಇಂದು ಬೆಳಿಗ್ಗೆ ಶುರುವಾದ ಪಾದಯಾತ್ರೆ, ಬಿಡದಿಯಿಂದ ರಾಮನಗರದ ಕೆಂಗಲ್ವರೆಗೆ ಸುಮಾರು 22 ಕಿ.ಮೀವರೆಗೆ ಸಾಗಲಿದೆ. ರಾಮನಗರದಲ್ಲಿ ಸಂಜೆ ವೇಳೆಗೆ ಬಿಜೆಪಿ-ಜೆಡಿಎಸ್ ನಾಯಕರು ಸಾರ್ವಜನಿಕ ಸಭೆ ನಡೆಸಲಿದ್ದಾರೆ.
ಪಾದಯಾತ್ರೆ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಮ್ಮ ಪಾದಯಾತ್ರೆ ನೋಡಿ ಆಡಳಿತ ಪಕ್ಷ ಕಾಂಗ್ರೆಸ್ ಗಾಬರಿಯಾಗಿದೆ. ರಾಜ್ಯದ ಜನರ ಪರ ನಾವು ಸರ್ಕಾರಕ್ಕೆ ಪ್ರಶ್ನೆ ಕೇಳುತ್ತಿದ್ದೇವೆ. ನಮ್ಮ ಪ್ರಶ್ನೆಗಳಿಗೆ ಸಿಎಂ ಹಾಗೂ ಡಿಸಿಎಂ ಇಬ್ಬರೂ ತಕ್ಕ ಉತ್ತರ ಕೊಡಬೇಕು. ಉತ್ತರ ಕೊಡುವ ಬದಲು ಬೆದರಿಕೆ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯ ಸರ್ಕಾರದಲ್ಲಿ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ಘಟನೆಗಳು ಸಂಭವಿಸುತ್ತಲೇ ಇವೆ. ಇದಕ್ಕೆಲ್ಲಾ ಯಾರು ಹೊಣೆ. ಈ ಬಗ್ಗೆ ಸೂಕ್ತ ತನಿಖೆ ಆಗಲೇಬೇಕು. ಸರ್ಕಾರದಲ್ಲಿ ನಿರಂತರವಾಗಿ ವರ್ಗಾವಣೆ ದಂಧೆಯೂ ನಡೆಯುತ್ತಿದೆ ಎಂದು ಕಿಡಿಕಾರಿದರು.
ಹಗರಣಗಳ ಬಗ್ಗೆ ಸೂಕ್ತ ಉತ್ತರ ನಮಗೆ ಬೇಕಿದೆ. ಸಿಎಂ ಹಾಗೂ ಡಿಸಿಎಂ ಇಬ್ಬರೂ ಸೇರಿ ನಮಗೆ ಉತ್ತರ ಕೊಡಬೇಕು. ಆ ವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಎಚ್ಚರಿಕೆ ನೀಡಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…