ರಾಜ್ಯ

ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ: ಸಿ.ಎಂ.ಆಕ್ರೋಶ

ಗದಗ್ (ರೋಣಾ): ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ 200 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ, ಸಿರಿ ದಾನ್ಯ ಉತ್ಪಾದನೆಯ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

1,20,000 ಕೋಟಿ ಹಣವನ್ನು ಈ ವರ್ಷ ರಾಜ್ಯ ಸರ್ಕಾರ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗಿದ್ದೂ ಬಿಜೆಪಿ ಬುರುಡೆ ಬಿಡುತ್ತಿದೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಪದೇ ಪದೇ ಸುಳ್ಳು ಹೇಳಿ ಅವರ ಸುಳ್ಳನ್ನು ಸತ್ಯ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ. ಆದರೆ ರಾಜ್ಯದ ಜನತೆ ಇವರ ಸುಳ್ಳು ನಂಬುವಷ್ಟು ಮೂರ್ಖರಲ್ಲ ಎಂದರು.

ರಾಜ್ಯದ 4.5 ಕೋಟಿ ಮಂದಿ ಗ್ಯಾರಂಟಿ ಯೋಜನೆಗಳ ನೇರ ಲಾಭ ಪಡೆಯುತ್ತಿದ್ದಾರೆ. ಇದಲ್ಲದೆ ರಸ್ತೆ, ನೀರು, ಕೃಷಿ, ನೀರಾವರಿ ಯೋಜನೆಗಳಿಗೂ ಸಾವಿರಾರು ಕೋಟಿ ಖರ್ಚು ಮಾಡುತ್ತಿದ್ದೇವೆ. ಸಮಾಜ ಕಲ್ಯಾಣಕ್ಕೆ, ದಲಿತ ಸಮುದಾಯದ ಪ್ರಗತಿಗೆ, ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಸಾವಿರ ಸಾವಿರ ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದೇವೆ.ಆದರೆ ಬಿಜೆಪಿ ಜಾತಿ-ಧರ್ಮದ ನಡುವೆ ದ್ವೇಷ ಹರಡಿ, ಜನರನ್ನು ವಿಭಜಿಸುವ ಏಕೈಕ ರಾಜಕಾರಣದಲ್ಲಿ ತೊಡಗಿದೆ ಎಂದರು.

ಬಸವಣ್ಣ, ಅಂಬೇಡ್ಕರ್, ಗಾಂಧಿ, ಬುದ್ಧ ಎಲ್ಲರ ಆಶಯದಂತೆ ಸಮ ಸಮಾಜವನ್ನು ಸೃಷ್ಟಿಸುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿ, ಜಾರಿ ಮಾಡುತ್ತಿದೆ. ಆದರೆ ಸಮಾಜದಲ್ಲಿರುವ ಅಸಮಾನತೆಯ ಅತಿಹೆಚ್ಚು ಲಾಭ ಪಡೆಯುತ್ತಿರುವ ಬಿಜೆಪಿ, ಸಮಾನತೆಯ ವಿರೋಧಿಯಾಗಿದೆ ಎಂದರು.

ಗಜೇಂದ್ರಘಡದ ಅತ್ತೆ ಸೊಸೆ ಇಬ್ಬರೂ ಗೃಹಲಕ್ಷ್ಮಿ ಹಣವನ್ನು ಉಳಿಸಿ ಅದರಲ್ಲಿ ಬೋರ್ ವೆಲ್ ಕೊರೆಸಿ ಸಮಾಜಕ್ಕೆ ಮಾದರಿ ಆಗಿದ್ದಾರೆ ಎಂದು ಸ್ಮರಿಸಿದ ಸಿಎಂ ಅತ್ತೆ-ಸೊಸೆ ಜೋಡಿಗೆ ಅಭಿನಂದನೆ ಸಲ್ಲಿಸಿದರು.

ಇಡೀ ಜಗತ್ತಿನಲ್ಲಿ ಸಿರಿಧಾನ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದೆ. ಹೆಚ್ಚಿನ ನಾರಿನ ಅಂಶ ಇರುವ ಸಿರಿದಾನ್ಯ ಬಳಸುವುದರಿಂದ ಶರೀರದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ದೇಹಕ್ಕೆ ಅಗತ್ಯವಾದ ಪ್ರೋಟೋನ್ ಹೇರಳವಾಗಿ ಸಿಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಸಿರಿದಾನ್ಯ ಬೆಳೆಯುವ ರೈತರಿಗೆ ನಾನಾ ರೀತಿಯ ಅನುಕೂಲ ಮಾಡಿಕೊಡುತ್ತಿದೆ ಎಂದರು.

ಜೆ.ಎಸ್.ಪಾಟೀಲರು ಮಂತ್ರಿ ಆಗಲು ಅರ್ಹರು

ಜೆ.ಎಸ್.ಪಾಟೀಲ್ ಅವರು ನನ್ನ ಬಳಿ ಬರುವುದು ರೋಣಾ ಮತ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಮಾತ್ರ. ಮುಂದಿನ ಬಜೆಟ್ ನಲ್ಲಿ ಕ್ಷೇತ್ರಕ್ಕೆ ಕೃಷಿ ಕಾಲೇಜು ನೀಡುವಂತೆ ಪಾಟೀಲರು ಒತ್ತಾಯಿಸಿದ್ದಾರೆ. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನತೆ ಒತ್ತಾಯಿಸಿದ್ದಾರೆ. ಎರಡೂ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು. ಜೆ.ಎಸ್.ಪಾಟೀಲರಿಗೆ ಮಂತ್ರಿ ಆಗುವ ಎಲ್ಲಾ ಅರ್ಹತೆಗಳಿವೆ. ಮುಂದೆ ನೋಡೋಣ ಎಂದು ಸಿಎಂ ಭರವಸೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

2 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

7 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

7 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

11 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

12 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

16 hours ago