ರಾಜ್ಯ

ಮೂರನೇ ದಿನಕ್ಕೆ ಕಾಲಿಟ್ಟ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ

ಚನ್ನಪಟ್ಟಣ: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಮೂರನೇ ದಿನವಾದ ಇಂದು ಕೆಂಗಲ್‌ನಲ್ಲಿರುವ ಆಂಜನೇಯ ದೇವಸ್ಥಾನದ ವೃತ್ತದಿಂದ ಪ್ರಾರಂಭವಾದ ಪಾದಯಾತ್ರೆಯಲ್ಲಿ  ಕೇಂದ್ರ ಸಚಿವ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.‌ಅಶೋಕ್‌, ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಹಲವು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಭಾಗಿಯಾಗಿದ್ದಾರೆ.

ಇಂದಿನ ಪಾದಯಾತ್ರೆ ಮಾರ್ಗದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಕಾರ್ಯಕರ್ತರನ್ನು ಉದ್ದೇಶಿಸಿ ಸಭೆ ನಡೆಸಲಿದ್ದು, ರಾಜ್ಯ ಸರ್ಕಾರದ ವಿರುದ್ಧ ಮುಂದೆ ಯಾವೆಲ್ಲಾ ತೀರ್ಮಾನ ತೆಗೆದುಕೊಳ್ಳಬೇಕು ಎಂಬುದನ್ನು ಈ ಸಭೆಯಲ್ಲಿ ಚರ್ಚಿಸಲಾಗುತ್ತದೆ.

ಪಾದಯಾತ್ರೆಯುದ್ದಕ್ಕೂ ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಸಚಿವರ ವಿರುದ್ಧವೂ ಆಕ್ರೋಶ ಹೊರಹಾಕುತ್ತಿರುವ ಬಿಜೆಪಿ-ಜೆಡಿಎಸ್‌ ನಾಯಕರು, ಘಟನೆ ಬಗ್ಗೆ ಸಿಎಂ ಪ್ರತಿಕ್ರಿಯೆ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸರ್ಕಾರ ಮಕ್ಕಳಿಗೆ ವೈಚಾರಿಕ ಶಿಕ್ಷಣ ನೀಡಲಿ: ಪ್ರೊ.ಕೆ.ಎಸ್ ಭಗವಾನ್

ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…

1 hour ago

ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…

2 hours ago

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ: ಡಿಸಿಎಂ ಡಿ.ಕೆ.ಶಿ ಆಕ್ರೋಶ

ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್‌ ಬಗ್ಗೆ…

3 hours ago

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

5 hours ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

5 hours ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

6 hours ago