ರಾಜ್ಯ

ರಾಜ್ಯದಲ್ಲಿ ಕೊಲೆ, ಆತ್ಮಹತ್ಯೆಗೆ ಸುಪಾರಿ ನೀಡಲು ಕಾಂಗ್ರೆಸ್‌ ಗ್ಯಾಂಗ್‌ ಸಂಪರ್ಕಿಸಿ: ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ನಿರಂತರವಾಗಿ ಅಧಿಕಾರಿಗಳು ಹಾಗೂ ರೈತರ ಆತ್ಮಹತ್ಯೆ, ಬಾಣಂತಿಯರ ಸರಣಿ ಸಾವು, ಪೋಲಿಸರ ಮೇಲೆ ಹಲ್ಲೆ ಹಾಗೂ ಅವಾಚ್ಯ ಶಬ್ದಗಳ ಬಳಕೆ ಸೇರಿದಂತೆ ಈ ಎಲ್ಲಾ ಘಟನೆಗಳಿಗೆ ಕಾಂಗ್ರೆಸ್‌ನ ನಾಯಕರೇ ಮುಖ್ಯ ಕಾರಣ ಎಂದು ಬಿಜೆಪಿ ಕಿಡಿಕಾರಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ರಾಜ್ಯದಲ್ಲಿ ಕೊಲೆ, ಬೆದರಿಕೆ, ಆತ್ಮಹತ್ಯೆಗೆ ಸುಪಾರಿ ನೀಡಲು ರೈತರು, ಅಧಿಕಾರಿಗಳ ಹತ್ಯೆಗೆ – ಸಿಎಂ ಸಿದ್ದರಾಮಯ್ಯ, ಧಮ್ಕಿಗೆ – ಡಿಸಿಎಂ ಡಿ.ಕೆ. ಶಿವಕುಮಾರ್, ಕೊಲೆಗೆ – ವಿನಯ್‌ ಕುಲಕರ್ಣಿ, ಆತ್ಮಹತ್ಯೆ ಸುಪಾರಿಗೆ – ಪ್ರಿಯಾಂಕ್‌ ಖರ್ಗೆ, ಶಾಸಕರ ಕೊಲೆಗೆ – ಲಕ್ಷ್ಮೀ ಹೆಬ್ಬಾಳ್ಕರ್‌, ಆಸ್ಪತ್ರೆಗಳಲ್ಲಿನ ಕೊಲೆಗೆ – ದಿನೇಶ್‌ ಗುಂಡೂರಾವ್, ದಲಿತರ ಮೇಲಿನ ಹಲ್ಲೆಗೆ – ಹಿರಿಯೂರು ಡಿ. ಸುಧಾಕರ್, ಪೊಲೀಸರ ಮೇಲೆ ಹಲ್ಲೆಗೆ – ವಿಜಯಾನಂದ ಕಾಶಪ್ಪನವರ್ ಹಾಗೂ ಅವಾಚ್ಯ ಶಬ್ಧ ಬಳಸಿ ಬೈಯಲು – ಅರಸೀಕೆರೆ ಶಿವಲಿಂಗೇಗೌಡ ಅವರನ್ನು ಅವಶ್ಯಕತೆ ಇರುವವರು ಬೆಂಗಳೂರಿನ ಕ್ವಿನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸಂಪರ್ಕಿಸಿ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿಯೂ ವಾಗ್ದಾಳಿ ನಡೆಸಿದೆ.

ಅರ್ಚನ ಎಸ್‌ ಎಸ್

Recent Posts

ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌: ಕಿಚ್ಚ ಸುದೀಪ್‌ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌ ಬಗ್ಗೆ ನಟ ಕಿಚ್ಚ ಸುದೀಪ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…

13 mins ago

ಓದುಗರ ಪತ್ರ: ಮರಗಳ ಕೊಂಬೆಗಳನ್ನು ಕತ್ತರಿಸಿ

ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…

44 mins ago

ಓದುಗರ ಪತ್ರ:  ಕುಸ್ತಿಪಟುಗಳಿಗೆ ತರಬೇತಿ ಸ್ವಾಗತಾರ್ಹ

ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…

50 mins ago

ಓದುಗರ ಪತ್ರ:  ರಾಜ್ಯ ಸರ್ಕಾರಿ ನೌಕರರಿಗೆ ವಸ್ತ್ರಸಂಹಿತೆ ಒಳ್ಳೆಯ ಬೆಳವಣಿಗೆ

ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…

54 mins ago

ಓದುಗರ ಪತ್ರ:  ವರುಣ ನಾಲೆಗೆ ತಡೆಗೋಡೆ ನಿರ್ಮಿಸಿ

ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…

56 mins ago

ಮೈಸೂರು ಮುಡಾ ಹಗರಣ: ಇಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ…

58 mins ago