ಬೆಂಗಳೂರು: ರಾಜ್ಯದಲ್ಲಿ ನಿರಂತರವಾಗಿ ಅಧಿಕಾರಿಗಳು ಹಾಗೂ ರೈತರ ಆತ್ಮಹತ್ಯೆ, ಬಾಣಂತಿಯರ ಸರಣಿ ಸಾವು, ಪೋಲಿಸರ ಮೇಲೆ ಹಲ್ಲೆ ಹಾಗೂ ಅವಾಚ್ಯ ಶಬ್ದಗಳ ಬಳಕೆ ಸೇರಿದಂತೆ ಈ ಎಲ್ಲಾ ಘಟನೆಗಳಿಗೆ ಕಾಂಗ್ರೆಸ್ನ ನಾಯಕರೇ ಮುಖ್ಯ ಕಾರಣ ಎಂದು ಬಿಜೆಪಿ ಕಿಡಿಕಾರಿದೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ರಾಜ್ಯದಲ್ಲಿ ಕೊಲೆ, ಬೆದರಿಕೆ, ಆತ್ಮಹತ್ಯೆಗೆ ಸುಪಾರಿ ನೀಡಲು ರೈತರು, ಅಧಿಕಾರಿಗಳ ಹತ್ಯೆಗೆ – ಸಿಎಂ ಸಿದ್ದರಾಮಯ್ಯ, ಧಮ್ಕಿಗೆ – ಡಿಸಿಎಂ ಡಿ.ಕೆ. ಶಿವಕುಮಾರ್, ಕೊಲೆಗೆ – ವಿನಯ್ ಕುಲಕರ್ಣಿ, ಆತ್ಮಹತ್ಯೆ ಸುಪಾರಿಗೆ – ಪ್ರಿಯಾಂಕ್ ಖರ್ಗೆ, ಶಾಸಕರ ಕೊಲೆಗೆ – ಲಕ್ಷ್ಮೀ ಹೆಬ್ಬಾಳ್ಕರ್, ಆಸ್ಪತ್ರೆಗಳಲ್ಲಿನ ಕೊಲೆಗೆ – ದಿನೇಶ್ ಗುಂಡೂರಾವ್, ದಲಿತರ ಮೇಲಿನ ಹಲ್ಲೆಗೆ – ಹಿರಿಯೂರು ಡಿ. ಸುಧಾಕರ್, ಪೊಲೀಸರ ಮೇಲೆ ಹಲ್ಲೆಗೆ – ವಿಜಯಾನಂದ ಕಾಶಪ್ಪನವರ್ ಹಾಗೂ ಅವಾಚ್ಯ ಶಬ್ಧ ಬಳಸಿ ಬೈಯಲು – ಅರಸೀಕೆರೆ ಶಿವಲಿಂಗೇಗೌಡ ಅವರನ್ನು ಅವಶ್ಯಕತೆ ಇರುವವರು ಬೆಂಗಳೂರಿನ ಕ್ವಿನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸಂಪರ್ಕಿಸಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯೂ ವಾಗ್ದಾಳಿ ನಡೆಸಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…