ರಾಜ್ಯ

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್ ಆಗಿದೆ – ಆರ್ ಅಶೋಕ್

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ವರದಿಗೆ ಸಂಬಂಧಪಟ್ಟಂತೆ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, ಸಿಎಂ ಹುದ್ದೆಗೆ ರಾಹುಲ್‌ ಗಾಂಧಿ ಎಷ್ಟು ರೇಟ್‌ ಫಿಕ್ಸ್‌ ಮಾಡಿದ್ದಾರೆ ಸಿದ್ದರಾಮಯ್ಯನವರೇ ಎಂದು ಮುಖ್ಯಮಂತ್ರಿಯನ್ನು ಪ್ರಶ್ನೆ ಮಾಡಿದ್ದಾರೆ.  ವರ್ಗಾವಣೆ ದಂಧೆಗೆ ರೇಟ್‌ ಫಿಕ್ಸ್‌ ಆಗಿದೆ. ಕರ್ನಾಟಕ ಕಾಂಗ್ರೆಸ್‌ ಸರ್ಕಾರದಲ್ಲಿ ವರ್ಗಾವಣೆ ದಂಧೆ ಎಷ್ಟು ಸಾಂಸ್ಥಿಕ ರೂಪ ಪಡೆದಿದೆ ಅಂದರೆ ಅಬಕಾರಿ ಇಲಾಖೆಯಲ್ಲಿ ಪೇದೆಯಿಂದ ಹಿಡಿದು ಉಪ ಆಯುಕ್ತ ಹುದ್ದೆಯವರಿಗೆ ೫ ಲಕ್ಷ ರೂಪಾಯಿಯಿಂದ ೩.೫ ಕೋಟಿ ರೂಪಾಯಿ ವರೆಗೆ ಲಂಚ ಫಿಕ್ಸ್‌ ಆಗಿದೆ ಎಂದು ಬರೆದುಕೊಂಡಿದ್ದಾರೆ.

ಅಲ್ಲದೆ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ಜೋರಾಗಿದೆ ಎಂದು ಪತ್ರಿಕಾ ವರದಿಯೊಂದನ್ನು ಅವರು ಲಗತ್ತಿಸಿದ್ದಾರೆ. ವರದಿಯ ಪ್ರಕಾರ ವರ್ಗಾವಣೆ ಅಬಕಾರಿ ಇಲಾಖೆಯ ಉಪ ಆಯುಕ್ತರ ಹುದ್ದೆಗೆ ೨.೫ ಕೋಟಿ ರೂ ನಿಂದ ೩.೫ ಕೋಟಿ ರೂ ಫಿಕ್ಸ್‌ ಆಗಿದೆ. ಅಧೀಕ್ಷಕರ ಹುದ್ದೆಗೆ ೫ ರಿಂದ ೩೫ ಲಕ್ಷ , ಉಪ ಅಧೀಕ್ಷಕ ಹುದ್ದೆಗೆ ೩೦ ರಿಂದ ೪೦ ಲಕ್ಷ, ಅಬಕಾರಿ ನಿರೀಕ್ಷಕ ಹುದ್ದೆಗೆ ೪೦ ರಿಂದ ೫೦ ಲಕ್ಷರೂ ಹಾಗೂ ನಿರೀಕ್ಷಕ ಹುದ್ದೆಗೆ ೧೫ ರಿಂದ ೨೦ ಲಕ್ಷ, ಮುಖ್ಯ ಪೇದೆ ಹುದ್ದೆಗೆ ೮ ರಿಂದ ೧೦ ಲಕ್ಷ ರೂ ಹಾಗೂ ಅಬಕಾರಿ ಪೇದೆಗೆ ೫ ರಿಂದ ೮ ಲಕ್ಷ ಲಂಚ ಫಿಕ್ಸ್‌ ಆಗಿದೆ. ಸಚಿವ ಕೆ ಹೆಚ್‌ ಮುನಿಯಪ್ಪ ಅಳಿಯನಿಗಾಗಿ ಸರ್ಕಾರ ಕಾರ್ಯದರ್ಶಿ ೨ ಹುದ್ದೆ ಸೃಷ್ಟಿಸಲು ಮುಂದಾಗಿದೆ ಎಂಬ ವರದಿಯನ್ನ ಉಲ್ಲೇಖಿಸಿ ಅಶೋಕ್ ವಾಗ್ದಾಳಿ ನಡೆಸಿದ್ದಾರೆ

ಜೊತೆಗೆ ಸಿಎಂ ಸಿದ್ದರಾಮಯ್ಯನವರೇ ಶಾಸಕರನ್ನು, ಸಚಿವರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲಾಗದೆ ಸಾರ್ವಜನಿಕರ ಹಣ ಪೋಲು ಮಾಡಿ ಶಾಸಕರಿಗೆ , ಸಚಿವರ ಸಂಬಂಧಿಗಳಿಗೆ ಬೇಕಾಬಿಟ್ಟಿ ಸ್ಥಾನಮಾನ ನೀಡುತ್ತಿರುವ ನೀವು ಕರ್ನಾಟಕ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಅಂದರೆ ತಪ್ಪಾಗಲಾರದು. ಇನ್ನೆಷ್ಟು ದಿನ ಈ ಭಂಡ ಬಾಳು. ಜನ ನಿಮ್ಮ ವಿರುದ್ಧ ದಂಗೆ ಏಳುವ ಮುನ್ನ ರಾಜೀನಾಮೆ ಕೊಟ್ಟು ಮರ್ಯಾದೆ ಉಳಿಸಿಕೊಳ್ಳಿ ಎಂದು ಕಿಡಿಕಾರಿದ್ದಾರೆ.‌

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

40 mins ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 hours ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

3 hours ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

4 hours ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

7 hours ago