ರಾಜ್ಯ

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್ ಆಗಿದೆ – ಆರ್ ಅಶೋಕ್

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ವರದಿಗೆ ಸಂಬಂಧಪಟ್ಟಂತೆ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, ಸಿಎಂ ಹುದ್ದೆಗೆ ರಾಹುಲ್‌ ಗಾಂಧಿ ಎಷ್ಟು ರೇಟ್‌ ಫಿಕ್ಸ್‌ ಮಾಡಿದ್ದಾರೆ ಸಿದ್ದರಾಮಯ್ಯನವರೇ ಎಂದು ಮುಖ್ಯಮಂತ್ರಿಯನ್ನು ಪ್ರಶ್ನೆ ಮಾಡಿದ್ದಾರೆ.  ವರ್ಗಾವಣೆ ದಂಧೆಗೆ ರೇಟ್‌ ಫಿಕ್ಸ್‌ ಆಗಿದೆ. ಕರ್ನಾಟಕ ಕಾಂಗ್ರೆಸ್‌ ಸರ್ಕಾರದಲ್ಲಿ ವರ್ಗಾವಣೆ ದಂಧೆ ಎಷ್ಟು ಸಾಂಸ್ಥಿಕ ರೂಪ ಪಡೆದಿದೆ ಅಂದರೆ ಅಬಕಾರಿ ಇಲಾಖೆಯಲ್ಲಿ ಪೇದೆಯಿಂದ ಹಿಡಿದು ಉಪ ಆಯುಕ್ತ ಹುದ್ದೆಯವರಿಗೆ ೫ ಲಕ್ಷ ರೂಪಾಯಿಯಿಂದ ೩.೫ ಕೋಟಿ ರೂಪಾಯಿ ವರೆಗೆ ಲಂಚ ಫಿಕ್ಸ್‌ ಆಗಿದೆ ಎಂದು ಬರೆದುಕೊಂಡಿದ್ದಾರೆ.

ಅಲ್ಲದೆ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ಜೋರಾಗಿದೆ ಎಂದು ಪತ್ರಿಕಾ ವರದಿಯೊಂದನ್ನು ಅವರು ಲಗತ್ತಿಸಿದ್ದಾರೆ. ವರದಿಯ ಪ್ರಕಾರ ವರ್ಗಾವಣೆ ಅಬಕಾರಿ ಇಲಾಖೆಯ ಉಪ ಆಯುಕ್ತರ ಹುದ್ದೆಗೆ ೨.೫ ಕೋಟಿ ರೂ ನಿಂದ ೩.೫ ಕೋಟಿ ರೂ ಫಿಕ್ಸ್‌ ಆಗಿದೆ. ಅಧೀಕ್ಷಕರ ಹುದ್ದೆಗೆ ೫ ರಿಂದ ೩೫ ಲಕ್ಷ , ಉಪ ಅಧೀಕ್ಷಕ ಹುದ್ದೆಗೆ ೩೦ ರಿಂದ ೪೦ ಲಕ್ಷ, ಅಬಕಾರಿ ನಿರೀಕ್ಷಕ ಹುದ್ದೆಗೆ ೪೦ ರಿಂದ ೫೦ ಲಕ್ಷರೂ ಹಾಗೂ ನಿರೀಕ್ಷಕ ಹುದ್ದೆಗೆ ೧೫ ರಿಂದ ೨೦ ಲಕ್ಷ, ಮುಖ್ಯ ಪೇದೆ ಹುದ್ದೆಗೆ ೮ ರಿಂದ ೧೦ ಲಕ್ಷ ರೂ ಹಾಗೂ ಅಬಕಾರಿ ಪೇದೆಗೆ ೫ ರಿಂದ ೮ ಲಕ್ಷ ಲಂಚ ಫಿಕ್ಸ್‌ ಆಗಿದೆ. ಸಚಿವ ಕೆ ಹೆಚ್‌ ಮುನಿಯಪ್ಪ ಅಳಿಯನಿಗಾಗಿ ಸರ್ಕಾರ ಕಾರ್ಯದರ್ಶಿ ೨ ಹುದ್ದೆ ಸೃಷ್ಟಿಸಲು ಮುಂದಾಗಿದೆ ಎಂಬ ವರದಿಯನ್ನ ಉಲ್ಲೇಖಿಸಿ ಅಶೋಕ್ ವಾಗ್ದಾಳಿ ನಡೆಸಿದ್ದಾರೆ

ಜೊತೆಗೆ ಸಿಎಂ ಸಿದ್ದರಾಮಯ್ಯನವರೇ ಶಾಸಕರನ್ನು, ಸಚಿವರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲಾಗದೆ ಸಾರ್ವಜನಿಕರ ಹಣ ಪೋಲು ಮಾಡಿ ಶಾಸಕರಿಗೆ , ಸಚಿವರ ಸಂಬಂಧಿಗಳಿಗೆ ಬೇಕಾಬಿಟ್ಟಿ ಸ್ಥಾನಮಾನ ನೀಡುತ್ತಿರುವ ನೀವು ಕರ್ನಾಟಕ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಅಂದರೆ ತಪ್ಪಾಗಲಾರದು. ಇನ್ನೆಷ್ಟು ದಿನ ಈ ಭಂಡ ಬಾಳು. ಜನ ನಿಮ್ಮ ವಿರುದ್ಧ ದಂಗೆ ಏಳುವ ಮುನ್ನ ರಾಜೀನಾಮೆ ಕೊಟ್ಟು ಮರ್ಯಾದೆ ಉಳಿಸಿಕೊಳ್ಳಿ ಎಂದು ಕಿಡಿಕಾರಿದ್ದಾರೆ.‌

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago